ಹೆಚ್ ಸಿ ಮಹದೇವಪ್ಪ 
ರಾಜ್ಯ

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸರ್ಕಾರ ಚಿಂತನೆ: ಸಚಿವ ಹೆಚ್ ಸಿ ಮಹದೇವಪ್ಪ

ಧಾರ್ಮಿಕ, ವೈಚಾರಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಕುರಿತು ಚಿಂತನೆಗಳ ನಡೆಸಲಾಗುತ್ತಿದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಅವರು ಭಾನುವಾರ ಹೇಳಿದರು.

ಮೈಸೂರು: ಧಾರ್ಮಿಕ, ವೈಚಾರಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಕುರಿತು ಚಿಂತನೆಗಳ ನಡೆಸಲಾಗುತ್ತಿದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಅವರು ಭಾನುವಾರ ಹೇಳಿದರು.

ಚಾಮುಂಡಿಬೆಟ್ಟದಲ್ಲಿ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ದಸರಾ ಸಾಂಸ್ಕೃತಿ ಕಾರ್ಯಕ್ರಮಗಳ ಜನರನ್ನು ಆಕರ್ಷಿಸುವ ಹಬ್ಬವಾಗಿದ್ದು, ಇದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ ಮತ್ತು ಅಭಿವೃದ್ಧಿಯಿಂದ ರಾಜ್ಯ ಸರ್ಕಾರ ಪ್ರೇರಿತವಾಗಿದ್ದು, ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಬದ್ಧವಾಗಿದ್ದೇವೆಂದು ತಿಳಿಸಿದರು.

ಪ್ರಗತಿಪರ ಚಿಂತನೆಗಳು, ಸಾಮಾಜಿಕ ಬದ್ಧತೆ, ಬಡವರು ಮತ್ತು ರೈತರ ಬಗ್ಗೆ ಅವರಿಗಿದ್ದ ಸಹಾನುಭೂತಿಯಿಂದ ಇಡೀ ವಿಶ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಗೌರವಿಸುತ್ತದೆ. ನಾದಬ್ರಹ್ಮ ಹಂಸಲೇಖ ಅವರು, ಈ ವರ್ಷ ದಸರಾ ಉತ್ಸವವನ್ನು ಉದ್ಘಾಟಿಸಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿಗೆ ವಿಷಪ್ರಾಶನ; ಇಬ್ಬರು ಶಂಕಿತರು ವಶಕ್ಕೆ

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

PUNE: ಬಿಜೆಪಿ ಭಾರತವನ್ನು ನರಕವಾಗಿಸಿದೆ; ರಾಮದಾಸ್ ಕದಮ್ 'ದ್ರೋಹಿ' ಎಂದ ಉದ್ಧವ್ ಠಾಕ್ರೆ!

SCROLL FOR NEXT