ಸಿಬಿಐ (ಸಂಗ್ರಹ ಚಿತ್ರ) 
ರಾಜ್ಯ

ಸಿಬಿಐ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕದ ಐಪಿಎಸ್ ಅಧಿಕಾರಿ ಕೃಷ್ಣಕಾಂತ್ ನೇಮಕ

ಕೇಂದ್ರೀಯ ತನಿಖಾ ದಳದ (ಸಿಬಿಐ) ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕದ ಐಪಿಎಸ್ ಅಧಿಕಾರಿಯೊಬ್ಬರು ನೇಮಕಗೊಂಡಿದ್ದಾರೆ.

ಬೆಂಗಳೂರು: ಕೇಂದ್ರೀಯ ತನಿಖಾ ದಳದ (ಸಿಬಿಐ) ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕದ ಐಪಿಎಸ್ ಅಧಿಕಾರಿಯೊಬ್ಬರು ನೇಮಕಗೊಂಡಿದ್ದಾರೆ.

ಆಂಧ್ರಪ್ರದೇಶ ಮೂಲದ ಪಿ ಕೃಷ್ಣಕಾಂತ್ ಅವರನ್ನು ಐದು ವರ್ಷಗಳ ಅವಧಿಗೆ, 'ಉದ್ದೇಶಿತ ದಿನಾಂಕದಿಂದ ಮುಂದಿನ ಆದೇಶದವರೆಗೆ' ಸಿಬಿಐ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ಸೋಮವಾರ ಹೊರಡಿಸಿದ ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಕೃಷ್ಣಕಾಂತ್ ಅವರು ಮೊದಲು ಭಾರತೀಯ ಕಂದಾಯ ಸೇವೆ (ಐಆರ್‌ಎಸ್)- 2014ರ ಬ್ಯಾಚ್‌ನವರಾಗಿದ್ದರು  ಮತ್ತು ಹೈದರಾಬಾದ್‌ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡರು. ನಂತರ 2016ರ ಐಪಿಎಸ್ ಬ್ಯಾಚ್‌ಗೆ ಆಯ್ಕೆಯಾಗಿದ್ದರು.

ಕೃಷ್ಣಕಾಂತ್ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ), ಧಾರವಾಡದ ಎಸ್‌ಪಿ ಮತ್ತು ಬೆಂಗಳೂರು ದಕ್ಷಿಣದ ಡಿಸಿಪಿಯಾಗಿ ಸೇವೆ ಸಲ್ಲಿಸುವ ಮೊದಲು ಹುಬ್ಬಳ್ಳಿ-ಧಾರವಾಡದಲ್ಲಿ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯದ ಅಪರಾಧ ತನಿಖಾ ಇಲಾಖೆಯಲ್ಲಿ (ಸಿಐಡಿ) ಎಸ್‌ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣಕಾಂತ್ ಅವರಲ್ಲದೆ, ಜಾರ್ಖಂಡ್ ಕೇಡರ್‌ನ 2015ರ ಬ್ಯಾಚ್‌ನ ಆರ್ ರಾಮ್ ಕುಮಾರ್ ಕೂಡ ಸಿಬಿಐನಲ್ಲಿ ನಿಯೋಜಿಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT