ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕಳ್ಳತನಕ್ಕೆ ನೆರವು ನೀಡುತ್ತಿದ್ದ ಪೊಲೀಸ್ ಪೇದೆ ಬಂಧನ

ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡಲು ಕಳ್ಳರಿಗೆ ನೆರವು ನೀಡುತ್ತಿದ್ದ ಪೊಲೀಸ್ ಪೇದೆಯೊಬ್ಬನನ್ನು ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡಲು ಕಳ್ಳರಿಗೆ ನೆರವು ನೀಡುತ್ತಿದ್ದ ಪೊಲೀಸ್ ಪೇದೆಯೊಬ್ಬನನ್ನು ಬಂಧನಕ್ಕೊಳಪಡಿಸಲಾಗಿದೆ.

ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಯಲ್ಲಪ್ಪ ಬಂಧಿತ ಆರೋಪಿ. ಕೆಲ ದಿನಗಳ ಹಿಂದಷ್ಟೇ ಕಳ್ಳನೊಬ್ಬನನ್ನು ಚಂದ್ರಾ ಲೇಔಟ್ ಪೊಲೀಸರು ಬಂಧನಕ್ಕೊಳಪಡಿಸಿದ್ದರು. ವಿಚಾರಣೆ ವೇಳೆ ಪೊಲೀಸ್ ಪೇದೆ ಕೈವಾಡವಿರುವುದನ್ನು ಬಾಯ್ಬಿಟ್ಟಿದ್ದ.

ಪೊಲೀಸರಿಗೆ ಸಿಕ್ಕಿಬೀಳಬಾರದೆಂದು ತಾನು ಬಳಸುತ್ತಿದ್ದ ವಾಹನದ ನೋಂದಣಿ ಸಂಖ್ಯೆಯ ಪೈಕಿ ಎರಡು ಸಂಖ್ಯೆಗಳನ್ನು ಯಲ್ಲಪ್ಪ ಬದಲಾಯಿಸಿದ್ದ. ಜೊತೆಗೆ ವಿಚಾರಣೆ ವೇಳೆ ಹೈಡ್ರಾಮ ಮಾಡಿರುವ ಈತ ವಿಚಾರಣೆಗಾಗಿ ಸ್ವಂತ ಊರಿಗೆ ಕರೆದೊಯ್ದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಲಂಚ ಕೇಳಿದರೆಂದು ದೂರು ನೀಡುತ್ತೇನೆಂದು ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾನೆ.

ಅಂತಿಮವಾಗಿ ಶಿರಗುಪ್ಪಕ್ಕೆ ತೆರಳಿ ಪರಿಚಯಸ್ಥರ ಬಳಿ ಬಚ್ಚಿಟ್ಟಿದ್ದ 4.10 ಲಕ್ಷ ರೂ. ಮೌಲ್ಯದ 4 ಕೆ.ಜಿ ಬೆಳ್ಳಿ, 26 ಗ್ರಾಂ ಚಿನ್ನ ಹಾಗೂ 2 ವಾಚ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಈತ ಬನಶಂಕರಿ, ಚಿಕ್ಕಜಾಲ ಮತ್ತು ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ಸ್ಥಾನದಲ್ಲಿರುವ ಯಲ್ಲಪ್ಪ ಕಳ್ಳತನ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿಲ್ಲ. ಆದರೆ, ಕಳ್ಳರಿಗೆ ನೆರವಾಗುತ್ತಿದ್ದ. ಲೂಟಿ ಮಾಡಿದ ಹಣವನ್ನು ಹಂಚಿಕೊಂಡ ಆರೋಪವೂ ಅವರ ಮೇಲಿದೆ' ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT