ಸಂಗ್ರಹ ಚಿತ್ರ 
ರಾಜ್ಯ

ಕೈಗಾರಿಕಾ ಪ್ರದೇಶಕ್ಕೆ ಲೋಡ್‌ ಶೆಡ್ಡಿಂಗ್‌ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ

ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ನಿರಂತರ ವಿದ್ಯುತ್‌ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ನಿರಂತರ ವಿದ್ಯುತ್‌ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ನಿನ್ನೆಯಷ್ಟೇ ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜತೆಗೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರು ವಿಡಿಯೋ ಸಂವಾದ ನಡೆಸಿದರು.

‘ರಾಜ್ಯ ವಿದ್ಯುತ್‌ ಅಭಾವ ಎದುರಿಸುತ್ತಿದ್ದರೂ ಬೆಸ್ಕಾಂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್‌ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಪೀಣ್ಯ, ಬಿಡದಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್‌ ಸಿಟಿ, ಕುಂಬಳಗೋಡು, ಮಾಲೂರು, ನೆಲಮಂಗಲ, ದಾಬಸ್‌ಪೇಟೆ, ದಾವಣಗೆರೆ, ತುಮಕೂರು, ಕೋಲಾರ, ಗೌರಿಬಿದನೂರು, ವೈಟ್‌ಫೀಲ್ಡ್‌, ಹೇರೋಹಳ್ಳಿ ಸೇರಿದಂತೆ ವಿವಿಧೆಡೆಯ ಉದ್ಯಮ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ಕೈಗಾರಿಕಾ ಸಂಸ್ಥೆಗಳು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಕೊರತೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ತಿಳಿಸಿದವು.

ಸೋಮವಾರ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್ ಸಂಘಗಳ ಸದಸ್ಯರು ಹೆಚ್ಚುತ್ತಿರುವ ವಿದ್ಯುತ್ ಕಡಿತದ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಸಚಿವ ಕೆಜೆ ಜಾರ್ಜ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಈ ಪತ್ರವನ್ನು ರವಾನಿಸಲಾಗಿತ್ತು. ವಿದ್ಯುತ್ ಕಡಿತದಿಂದ ಕೋಲ್ಡ್ ಸ್ಟೋರೇಜ್‌ನಲ್ಲಿರುವ ವಸ್ತುಗಳು ಕೊಳೆಯಲು ಆರಂಭಿಸಿರುವುದರಿಂದ ಆರ್ಥಿಕ ನಷ್ಟ ಅನುಭವಿಸುತ್ತಿದ್ದೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT