ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ 
ರಾಜ್ಯ

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

ಬೆಂಗಳೂರು: ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

'ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ರಾಜ್ಯದ ಎಂಟು ಮಂದಿ ಪದಕಗಳನ್ನು ಗೆದ್ದಿದ್ದಾರೆ.' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

'ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್‌ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ' ಎಂದೂ ಅಭಿಪ್ರಾಯಪಟ್ಟರು.

'ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ. ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು' ಎಂದು ಅವರು ವಿವರಿಸಿದರು.

'ಈಗ ನಮ್ಮ ರಾಜ್ಯದಿಂದ ಎಂಟು ಮಂದಿ ಪದಕ ಪಡೆದಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಒಲಿಂಪಿಕ್ಸ್‌ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ' ಎಂದು ಶುಭ ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

SCROLL FOR NEXT