ಪ್ರಾತಿನಿಧಿಕ ಚಿತ್ರ 
ರಾಜ್ಯ

ಭೀಕರ ಅಪಘಾತ: ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದು ನಾಲ್ವರು ಸಾವು

ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ವಿಜಯಪುರ: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅಪಘಾತದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತರನ್ನು ವಿಜಯಪುರ ನಗರದ ವಜ್ರ ಹನುಮಾನ್ ನಗರ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ್ (26), ಈರಣ್ಣ (26) ಮತ್ತು 40 ವರ್ಷದ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ.

ಹಿಟ್ನಳ್ಳಿ ಟೋಲ್ ಪ್ಲಾಜಾ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

ನಾಲ್ಕು ಮಂದಿ ಹೆದ್ದಾರಿಯ ಟ್ರಕ್ ಬೇ ಸರ್ವೀಸ್ ರಸ್ತೆಯಲ್ಲಿ ತಮ್ಮ ಬೈಕ್ ಗಳನ್ನು ನಿಲ್ಲಿಸಿದ್ದರು. ಸಮೀಪದ ಹೋಟೆಲ್‌ನಲ್ಲಿ ಊಟ ಮುಗಿಸಿ ರಸ್ತೆಯ ಡಿವೈಡರ್ ಮೇಲೆ ಕುಳಿತು ಹರಟೆ ಹೊಡೆಯುತ್ತಿದ್ದ ವೇಳೆ, ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ಕಳೆದುಕೊಂಡು ನಾಲ್ವರ ಮೇಲೆ ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಎರಡು ಬೈಕ್‌ಗಳು ಜಖಂಗೊಂಡಿವೆ.

ಸಿಸಿಟಿವಿ ಕ್ಯಾಮೆರಾಗಳು ಈ ಘಟನೆಯನ್ನು ಸೆರೆ ಹಿಡಿದಿವೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾಗಿಯಾಗಿರುವ ವಾಹನ ಮಹಾರಾಷ್ಟ್ರದ್ದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ವಿಜಯಪುರ ಗ್ರಾಮಾಂತರ ಪೊಲೀಸರು ಬೈಕ್ ಗಳ ನೋಂದಣಿ ಸಂಖ್ಯೆ ಪಡೆದು ಮಾಮೃತರ ವಿವರಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ