ಸಚಿವ ಶಿವಾನಂದ ಪಾಟೀಲ್ ಮೇಲೆ ನೋಟುಗಳ ಮಳೆ 
ರಾಜ್ಯ

ಹೈದರಾಬಾದ್‌ನಲ್ಲಿ ಕರ್ನಾಟಕ ಸಚಿವ ಶಿವಾನಂದ್ ಪಾಟೀಲ್ ಮೇಲೆ ನೋಟುಗಳ ಮಳೆಸುರಿಸಿದ ವಿಡಿಯೋ ವೈರಲ್! ಬಿಜೆಪಿ ವಾಗ್ದಾಳಿ

ಹೈದರಾಬಾದ್‌ನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಸಚಿವ ಶಿವಾನಂದ್ ಪಾಟೀಲ್ ಅವರ ಮೇಲೆ ಕರೆನ್ಸಿ ನೋಟುಗಳ ಸುರಿಮಳೆಯಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಕರ್ನಾಟಕ ಬಿಜೆಪಿ ಘಟಕ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

ಬೆಂಗಳೂರು: ಹೈದರಾಬಾದ್‌ನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಸಚಿವ ಶಿವಾನಂದ್ ಪಾಟೀಲ್ ಅವರ ಮೇಲೆ ಕರೆನ್ಸಿ ನೋಟುಗಳ ಸುರಿಮಳೆಯಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಕರ್ನಾಟಕ ಬಿಜೆಪಿ ಘಟಕ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

ಮೂರು ದಿನಗಳ ಹಿಂದೆ 'ಕವ್ವಾಲಿ' ಆಯೋಜಿಸಿದ್ದ ಮದುವೆಯಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪ್ರತಿಕ್ರಿಯಿಸಿದ ಸಚಿವರು, ಇದು ಬೇರೆ ರಾಜ್ಯದಲ್ಲಿ ನಡೆದಿದೆಯೇ ಹೊರತು ನಮ್ಮ ರಾಜ್ಯದಲ್ಲಿ ನಡೆದಿದ್ದಲ್ಲ ಹೀಗಾಗಿ ನಾನು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಜವಳಿ ಮತ್ತು ಕಬ್ಬು ಅಭಿವೃದ್ಧಿ ಖಾತೆಗಳ ಸಚಿವ ಶಿವಾನಂದ್ ಪಾಟೀಲ್ ಅವರ ಮೇಲೆ ಅಲ್ಲಿದ್ದವರು ಕರೆನ್ಸಿ ನೋಟುಗಳ ಸುರಿಮಳೆಗೈದಿದ್ದಾರೆ.

ಈ ವಿಡಿಯೋವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ ಘಟಕ, 'ಕರ್ನಾಟಕದ ಕಾಂಗ್ರೆಸ್ ಸಚಿವರು ವಸೂಲಾತಿ ದಂಧೆಯಲ್ಲಿ ಮುಳುಗಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಮಂತ್ರಿಗಳು ಹೇಗೆ ಆನಂದಿಸುತ್ತಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ನೇರ ಪ್ರದರ್ಶನ ನೀಡಿದ್ದಾರೆ ಎಂದು ಕಿಡಿಕಾರಿದರು.

ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಚಿವರನ್ನು ಕೇಳಿ ವಿವರ ಪಡೆಯುವುದಾಗಿ ಹೇಳಿದರು.

ಇನ್ನು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಮಾತನಾಡಿ, ನಿಜವಾಗಿ ಏನಾಯಿತು ಎಂದು ತಿಳಿಯದೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT