ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಶಿವಾಜಿನಗರದ ಹಸನ್ ಖಾನ್ ಬಂಧಿತ ಆರೋಪಿ, ಸದಾಶಿವನಗರ ಠಾಣೆ ಮುಖ್ಯ ಪೇದೆ ಸೈಯದ್ ಸಮೀವುಲ್ಲಾ ಅವರ ಮೇಲೆ ಈತ ಹಲ್ಲೆ ನಡೆಸಿದ್ದ. ದಾಳಿಯಲ್ಲಿ ಸಮೀವುಲ್ಲಾ ಅವರ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಶಿವಾಜಿನಗರ ಹೆಚ್.ಕೆ.ಪಿ.ದರ್ಗಾ ಸರ್ಕಲ್ ಸಮೀಪ ಘಟನೆ ನಡೆದಿತ್ತು. ಅಪರಾಧ ಪ್ರಕರಣದಲ್ಲಿ ಹಸನ್ ಹುಡುಕಿಕೊಂಡಿ ಶಿವಾಜಿನಗರ ಸಿಸಿಬಿ ಪೊಲೀಸರು ತೆರಳಿದ್ದರು. ಅದೇ ವೇಳೆ ದರ್ಗಾ ಬಳಿ ಚಹಾ ಸೇವನೆಗೆ ತೆರಳಿದ್ದ ಸಮೀವುಲ್ಲ ಆವರಿಗೆ ಸಿಸಿಬಿ ತಂಡ ಕಂಡಿದೆ.

ಅದೇ ಹೊತ್ತಿಗೆ ದರ್ಗಾ ಸಮೀಪ ಇದ್ದ ಹಸನ್ ನನ್ನು ಹಿಡಿದು ಪಕ್ಕಕ್ಕೆ ಸಮೀವುಲ್ಲಾ ಕರೆದೊಯ್ದಿದ್ದಾರೆ. ಈ ಹಂತದಲ್ಲಿ ಸಮೀವುಲ್ಲಾ ಅವರಿಗೆ ಚಾಕುವಿನಿಂದ ಇರಿಸಲು ಹಸನ್ ಯತ್ನಿಸಿದ್ದಾನೆ. ಕೂಡಲೇ ಚಾಕು ಹಿಡಿದುಕೊಂಡಾಗ ಸಮೀವುಲ್ಲಾ ಅವರಿಗೆ ಗಾಯವಾಗಿದೆ. ಘಟನೆ ಬಳಿಕ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel