ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಶಿವಾಜಿನಗರದ ಹಸನ್ ಖಾನ್ ಬಂಧಿತ ಆರೋಪಿ, ಸದಾಶಿವನಗರ ಠಾಣೆ ಮುಖ್ಯ ಪೇದೆ ಸೈಯದ್ ಸಮೀವುಲ್ಲಾ ಅವರ ಮೇಲೆ ಈತ ಹಲ್ಲೆ ನಡೆಸಿದ್ದ. ದಾಳಿಯಲ್ಲಿ ಸಮೀವುಲ್ಲಾ ಅವರ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಶಿವಾಜಿನಗರ ಹೆಚ್.ಕೆ.ಪಿ.ದರ್ಗಾ ಸರ್ಕಲ್ ಸಮೀಪ ಘಟನೆ ನಡೆದಿತ್ತು. ಅಪರಾಧ ಪ್ರಕರಣದಲ್ಲಿ ಹಸನ್ ಹುಡುಕಿಕೊಂಡಿ ಶಿವಾಜಿನಗರ ಸಿಸಿಬಿ ಪೊಲೀಸರು ತೆರಳಿದ್ದರು. ಅದೇ ವೇಳೆ ದರ್ಗಾ ಬಳಿ ಚಹಾ ಸೇವನೆಗೆ ತೆರಳಿದ್ದ ಸಮೀವುಲ್ಲ ಆವರಿಗೆ ಸಿಸಿಬಿ ತಂಡ ಕಂಡಿದೆ.

ಅದೇ ಹೊತ್ತಿಗೆ ದರ್ಗಾ ಸಮೀಪ ಇದ್ದ ಹಸನ್ ನನ್ನು ಹಿಡಿದು ಪಕ್ಕಕ್ಕೆ ಸಮೀವುಲ್ಲಾ ಕರೆದೊಯ್ದಿದ್ದಾರೆ. ಈ ಹಂತದಲ್ಲಿ ಸಮೀವುಲ್ಲಾ ಅವರಿಗೆ ಚಾಕುವಿನಿಂದ ಇರಿಸಲು ಹಸನ್ ಯತ್ನಿಸಿದ್ದಾನೆ. ಕೂಡಲೇ ಚಾಕು ಹಿಡಿದುಕೊಂಡಾಗ ಸಮೀವುಲ್ಲಾ ಅವರಿಗೆ ಗಾಯವಾಗಿದೆ. ಘಟನೆ ಬಳಿಕ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT