ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಶಿವಾಜಿನಗರದ ಹಸನ್ ಖಾನ್ ಬಂಧಿತ ಆರೋಪಿ, ಸದಾಶಿವನಗರ ಠಾಣೆ ಮುಖ್ಯ ಪೇದೆ ಸೈಯದ್ ಸಮೀವುಲ್ಲಾ ಅವರ ಮೇಲೆ ಈತ ಹಲ್ಲೆ ನಡೆಸಿದ್ದ. ದಾಳಿಯಲ್ಲಿ ಸಮೀವುಲ್ಲಾ ಅವರ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಶಿವಾಜಿನಗರ ಹೆಚ್.ಕೆ.ಪಿ.ದರ್ಗಾ ಸರ್ಕಲ್ ಸಮೀಪ ಘಟನೆ ನಡೆದಿತ್ತು. ಅಪರಾಧ ಪ್ರಕರಣದಲ್ಲಿ ಹಸನ್ ಹುಡುಕಿಕೊಂಡಿ ಶಿವಾಜಿನಗರ ಸಿಸಿಬಿ ಪೊಲೀಸರು ತೆರಳಿದ್ದರು. ಅದೇ ವೇಳೆ ದರ್ಗಾ ಬಳಿ ಚಹಾ ಸೇವನೆಗೆ ತೆರಳಿದ್ದ ಸಮೀವುಲ್ಲ ಆವರಿಗೆ ಸಿಸಿಬಿ ತಂಡ ಕಂಡಿದೆ.

ಅದೇ ಹೊತ್ತಿಗೆ ದರ್ಗಾ ಸಮೀಪ ಇದ್ದ ಹಸನ್ ನನ್ನು ಹಿಡಿದು ಪಕ್ಕಕ್ಕೆ ಸಮೀವುಲ್ಲಾ ಕರೆದೊಯ್ದಿದ್ದಾರೆ. ಈ ಹಂತದಲ್ಲಿ ಸಮೀವುಲ್ಲಾ ಅವರಿಗೆ ಚಾಕುವಿನಿಂದ ಇರಿಸಲು ಹಸನ್ ಯತ್ನಿಸಿದ್ದಾನೆ. ಕೂಡಲೇ ಚಾಕು ಹಿಡಿದುಕೊಂಡಾಗ ಸಮೀವುಲ್ಲಾ ಅವರಿಗೆ ಗಾಯವಾಗಿದೆ. ಘಟನೆ ಬಳಿಕ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT