ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ದೇಸಿ ಸಮ್ಮೇಳನ ಮತ್ತು ಬೇಕಿಂಗ್ ಮೌಲ್ಯ ವರ್ಧನಾ ಸಂಸ್ಥೆಯ ನೂತನ‌ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ. 
ರಾಜ್ಯ

ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳು ಹೆಚ್ಚಾಗಬೇಕು: ಸಿಎಂ ಸಿದ್ದರಾಮಯ್ಯ

ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಎದುರಾಗುತ್ತಲೇ ಇದ್ದು, ಈ ನಿಟ್ಟಿನಲ್ಲಿ ಕಡಿಮೆ ಮಳೆಯಾದಾಗ ಕಡಿಮೆ ನೀರು ಬಳಸಿ ಯಾವ ರೀತಿಯ ಬೆಳೆಗಳನ್ನು ಬೆಳೆಯಬಹುದು, ಬೆಳೆ ಹಾನಿಯನ್ನು ತಡೆಗಟ್ಟುವುದು ಹೇಗೆ...

ಬೆಂಗಳೂರು: ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಎದುರಾಗುತ್ತಲೇ ಇದ್ದು, ಈ ನಿಟ್ಟಿನಲ್ಲಿ ಕಡಿಮೆ ಮಳೆಯಾದಾಗ ಕಡಿಮೆ ನೀರು ಬಳಸಿ ಯಾವ ರೀತಿಯ ಬೆಳೆಗಳನ್ನು ಬೆಳೆಯಬಹುದು, ಬೆಳೆ ಹಾನಿಯನ್ನು ತಡೆಗಟ್ಟುವುದು ಹೇಗೆ ಎಂಬುದರ ಬಗ್ಗೆ ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗಳನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ದೇಸಿ ಸಮ್ಮೇಳನ ಮತ್ತು ಬೇಕಿಂಗ್ ಮೌಲ್ಯ ವರ್ಧನಾ ಸಂಸ್ಥೆಯ ನೂತನ‌ ಕಟ್ಟಡವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಬೆಳೆಯುತ್ತಿರುವ ಜನಸಂಖ್ಯೆಯ ಅಗತ್ಯಗಳನ್ನು ಪೂರೈಸಲು ಆಹಾರ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಕೃಷಿ ವಿಶ್ವವಿದ್ಯಾಲಯಗಳು ಪ್ರಮುಖ ಪಾತ್ರವಹಿಸುತ್ತವೆ. ಕೃಷಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮತ್ತು ಸಂಶೋಧನೆಯು ಗುಣಾತ್ಮಕವಾಗಬೇಕು ಮತ್ತು ಆಹಾರ ಉತ್ಪಾದನೆಯನ್ನು ಹೆಚ್ಚಿಸಬೇಕು. ಕರ್ನಾಟಕವು ಅತಿ ಹೆಚ್ಚು ಒಣ ಕೃಷಿ ಭೂಮಿಯನ್ನು ಹೊಂದಿದ್ದು, ಹವಾಮಾನ ಬದಲಾವಣೆಯಿಂದಾಗಿ ನಿರಂತರವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಯನ್ನು ಎದುರಿಸುತ್ತಿದೆ, ಈ ನಿಟ್ಟಿನಲ್ಲಿ ಕೃಷಿ ವಿವಿಗಳು ಬೆಳೆಗಳ ಬಗ್ಗೆ ವ್ಯಾಪಕ ಸಂಶೋಧನೆ ನಡೆಸಬೇಕು ಎಂದು ಹೇಳಿದರು.

ಕೃಷಿ ವಿಶ್ವವಿದ್ಯಾನಿಲಯಗಳು ರೈತರ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳಲು ಲ್ಯಾಬ್‌ನಿಂದ ಭೂಮಿ ಮತ್ತು ಭೂಮಿಯಿಂದ ಲ್ಯಾಬ್ ಪರಿಕಲ್ಪನೆಗಳ ಆಧಾರದ ಮೇಲೆ ವೈಜ್ಞಾನಿಕ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಂಶೋಧನೆ-ಅಧ್ಯಯನ ಮತ್ತು ವಿಸ್ತರಣಾ ಕಾರ್ಯಗಳಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಕೃಷಿ ವಿಶ್ವವಿದ್ಯಾಲಯಗಳು ಅಭಿವೃದ್ಧಿಪಡಿಸಿರುವ ಹೊಸ ತಳಿಗಳು ರೈತರಿಗೆ ತಲುಪಿವೆಯೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ರೈತರ ಆದಾಯ ಹೆಚ್ಚಿಸಲು ಕೃಷಿ ವಿಶ್ವವಿದ್ಯಾಲಯಗಳು ಸರ್ಕಾರದೊಂದಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT