ಸಂಸದ ತೇಜಸ್ವಿ ಸೂರ್ಯ 
ರಾಜ್ಯ

ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರು: ನವರಾತ್ರಿಯ ಆಯುಧ ಪೂಜೆ ಸಮಯದಲ್ಲಿ ರಾಸಾಯನಿಕಯುಕ್ತ ಬಣ್ಣ, ಅರಶಿನ-ಕುಂಕುಮವನ್ನು ಬಳಸುವುದಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಈ ಬಗ್ಗೆ ಸಾರ್ವಜನಿಕ ವಲಯದಿಂದ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಹೊಸ ಆದೇಶವೇನಲ್ಲ, ಹಿಂದಿನ ಬಿಜೆಪಿ ಸರ್ಕಾರವೇ ಆದೇಶ ಹೊರಡಿಸಿದ್ದು ಮತ್ತು ಯಾವ ಕಾರಣಕ್ಕೆ ಎಂದು ಕೂಡ ಸ್ಪಷ್ಟಪಡಿಸಿದ್ದಾರೆ.

ಇಲ್ಲಿ ಚರ್ಚೆಯಾಗುತ್ತಿರುವ ಮತ್ತೊಂದು ವಿಷಯ ತಮಿಳು ನಾಡಿನ ಡಿಎಂಕೆ ಸರ್ಕಾರ ಕೂಡ ಆಯುಧ ಪೂಜೆ ಸಮಯದಲ್ಲಿ ಇಂತಹದ್ದೇ ಆದೇಶ ಹೊರಡಿಸಿದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ವಿರುದ್ಧವಾಗಿ ಸೆಣಸಾಡುತ್ತಿರುವ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಮತ್ತು ಡಿಎಂಕೆ ಇಂತಹ ಆದೇಶ ಹೊರಡಿಸಿರುವುದರಲ್ಲಿ ಯಾವುದೇ ಅಚ್ಚರಿಯಿಲ್ಲ ಎನ್ನುತ್ತಾರೆ ಬೆಂಗಳೂರು ದಕ್ಷಿಣ ಕೇಂದ್ರದ ಸಂಸದ ತೇಜಸ್ವಿ ಸೂರ್ಯ.

ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ. ಈ ಹಿಂದೆ ಹಲವಾರು ಉದಾಹರಣೆಗಳು ಅವರ ರಾಜಕೀಯದ ಬಹಿರಂಗ ಹಿಂದೂ ವಿರೋಧಿ ಸ್ವಭಾವವನ್ನು ಬಹಿರಂಗಪಡಿಸುತ್ತವೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಇಂಡಿಯಾ ಮೈತ್ರಿಯಲ್ಲಿ ಪಕ್ಷಗಳ ನಡುವೆ ಭಿನ್ನಾಭಿಪ್ರಾಯವಿರಬಹುದು, ಆದರೆ ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಅವರು ಒಂದು ಎಂದು ಪ್ರತಿಪಾದಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರೂ, ಆಯುಧ ಪೂಜೆಯ ವೇಳೆ ದೇವರ ಮೂರ್ತಿ ಅಥವಾ ವಿಗ್ರಹಗಳ ಬಳಕೆಯನ್ನು ನಿಷೇಧಿಸುವ ಅದರ ಮೈತ್ರಿ ಪಾಲುದಾರ ಡಿಎಂಕೆ ಸರ್ಕಾರ ಸುತ್ತೋಲೆಯನ್ನು ಹಿಂತೆಗೆದುಕೊಂಡಿಲ್ಲ ಎಂದು ತೇಜಸ್ವಿ ಸೂರ್ಯ ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT