ರಾಷ್ಟ್ರಪತಿ ದ್ರೌಪದಿ ಮುರ್ಮು 
ರಾಜ್ಯ

ಅಕ್ಟೋಬರ್ 26 ರಂದು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.

ಸುವರ್ಣ ಮಹೋತ್ಸವದ ಅಂಗವಾಗಿ ಐಐಎಂ ಬೆಂಗಳೂರು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಮೊದಲ ದಿನ(ಅಕ್ಟೋಬರ್ 26) ಐಐಎಂಬಿ ಆಡಿಟೋರಿಯಂನಲ್ಲಿ ಸಂಜೆ 4 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ನಂತರ ಐಐಎಂಬಿ ಕ್ಯಾಂಪಸ್‌ನಲ್ಲಿ ಪುಸ್ತಕ ಬಿಡುಗಡೆ ಹಾಗೂ ಚಲನಚಿತ್ರ ಪ್ರದರ್ಶನ ನಡೆಯಲಿದೆ.

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಐಐಎಂ ಬೆಂಗಳೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಮತ್ತು ಐಐಎಂ ಬೆಂಗಳೂರು ನಿರ್ದೇಶಕ ಪ್ರೊ ರಿಷಿಕೇಶ ಟಿ ಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT