ಯಶವಂತ್ 
ರಾಜ್ಯ

ಚಿತ್ರದುರ್ಗ: ಅಜ್ಜ ಮೊಬೈಲ್​ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆಗೆ ಶರಣು!

ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜ ನಿರಾಕರಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ: ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜ ನಿರಾಕರಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ.

ಅಕ್ಟೋಬರ್ 8 ರಂದು ಕೊಳಾಳ್ ಗ್ರಾಮದಲ್ಲಿ 'ಮಹಾಗಣಪತಿ ಶೋಭಾಯಾತ್ರೆ' ಸಮಯದಲ್ಲಿ ಮೃತ ಯಶವಂತ್ ತನ್ನ ಮೊಬೈಲ್ ಫೋನ್ ಕಳೆದುಕೊಂಡಿದ್ದು, ನಂತರ ತನ್ನ ಅಜ್ಜನಿಗೆ ಹೊಸ ಮೊಬೈಲ್ ಕೊಡಿಸುವಂತೆ ಕೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ರೈತನಾಗಿರುವ ಯಶವಂತ್ ಅಜ್ಜ, ಈರುಳ್ಳಿ ಬಂದ ಬಳಿಕ ಹೊಸ ಸೆಲ್ ಫೋನ್ ಕೊಡಿಸುವುದಾಗಿ ಭರವಸೆ ನೀಡಿದ್ದರು.

ಆದರೆ, ಕೂಡಲೇ ಹೊಸ ಮೊಬೈಲ್ ಕೊಡಿಸುವಂತೆ ಅಕ್ಟೋಬರ್ 18ರಂದು ಯಶವಂತ ತನ್ನ ಅಜ್ಜನಿಗೆ ಒತ್ತಾಯಿಸಿದ್ದರು. ಆದರೆ ಅಜ್ಜ ನಿರಾಕರಿಸಿದಾಗ ವಿಷ ಸೇವಿಸಿದ್ದಾರೆ. ತಕ್ಷಣ ಯಶವಂತ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಗುರುವಾರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಆಸ್ಪತ್ರೆಗೆ ಸಾಗಿಸುವಾಗ ಯಶವಂತ್ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ವರ್ಷಗಳ ಹಿಂದೆಯೇ ತಂದೆ ತೀರಿಕೊಂಡಿದ್ದು, ಯಶವಂತ್ ತನ್ನ ತಾಯಿ ಮತ್ತು ಅಜ್ಜಿಯೊಂದಿಗೆ ಗ್ರಾಮದಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT