ಯಶವಂತ್ 
ರಾಜ್ಯ

ಚಿತ್ರದುರ್ಗ: ಅಜ್ಜ ಮೊಬೈಲ್​ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆಗೆ ಶರಣು!

ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜ ನಿರಾಕರಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ: ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜ ನಿರಾಕರಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ.

ಅಕ್ಟೋಬರ್ 8 ರಂದು ಕೊಳಾಳ್ ಗ್ರಾಮದಲ್ಲಿ 'ಮಹಾಗಣಪತಿ ಶೋಭಾಯಾತ್ರೆ' ಸಮಯದಲ್ಲಿ ಮೃತ ಯಶವಂತ್ ತನ್ನ ಮೊಬೈಲ್ ಫೋನ್ ಕಳೆದುಕೊಂಡಿದ್ದು, ನಂತರ ತನ್ನ ಅಜ್ಜನಿಗೆ ಹೊಸ ಮೊಬೈಲ್ ಕೊಡಿಸುವಂತೆ ಕೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ರೈತನಾಗಿರುವ ಯಶವಂತ್ ಅಜ್ಜ, ಈರುಳ್ಳಿ ಬಂದ ಬಳಿಕ ಹೊಸ ಸೆಲ್ ಫೋನ್ ಕೊಡಿಸುವುದಾಗಿ ಭರವಸೆ ನೀಡಿದ್ದರು.

ಆದರೆ, ಕೂಡಲೇ ಹೊಸ ಮೊಬೈಲ್ ಕೊಡಿಸುವಂತೆ ಅಕ್ಟೋಬರ್ 18ರಂದು ಯಶವಂತ ತನ್ನ ಅಜ್ಜನಿಗೆ ಒತ್ತಾಯಿಸಿದ್ದರು. ಆದರೆ ಅಜ್ಜ ನಿರಾಕರಿಸಿದಾಗ ವಿಷ ಸೇವಿಸಿದ್ದಾರೆ. ತಕ್ಷಣ ಯಶವಂತ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಗುರುವಾರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಆಸ್ಪತ್ರೆಗೆ ಸಾಗಿಸುವಾಗ ಯಶವಂತ್ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ವರ್ಷಗಳ ಹಿಂದೆಯೇ ತಂದೆ ತೀರಿಕೊಂಡಿದ್ದು, ಯಶವಂತ್ ತನ್ನ ತಾಯಿ ಮತ್ತು ಅಜ್ಜಿಯೊಂದಿಗೆ ಗ್ರಾಮದಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

ಅಷ್ಟೊಂದು ಪ್ರೀತಿ ಇದ್ದರೆ, ನಿಮ್ಮ ಮನೆಗೇಕೆ ಕರೆದೊಯ್ಯಬಾರದು?; ಶ್ವಾನ ಪ್ರಿಯರಿಗೆ ಸುಪ್ರೀಂ ಕೋರ್ಟ್ ಚಾಟಿ

ಇರಾನ್ ಅಶಾಂತಿ: ಭಾರತದ ಬಾಸ್ಮತಿ ಅಕ್ಕಿ ರಫ್ತಿಗೆ ಹೊಡೆತ, ಬೆಲೆ ಕುಸಿತ

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

Toxic Teaser: ಯಶ್ ಅಭಿಮಾನಿಗಳು ನಿರಾಳ, ಯೂಟ್ಯೂಬ್ ವಿಡಿಯೋಗೆ 'ಪ್ರಮಾಣ ಪತ್ರ ಅವಶ್ಯಕತೆ ಇಲ್ಲ': ಸೆನ್ಸಾರ್ ಮಂಡಳಿ

SCROLL FOR NEXT