ವ್ಯಾಪಾರಿಗಳು 
ರಾಜ್ಯ

ಮಂಗಳೂರು: ಹಿಂದೂ ವ್ಯಾಪಾರಿಗಳಿಗೂ ತಟ್ಟಿದ ವಿಎಚ್‌ಪಿ ಬಹಿಷ್ಕಾರದ ಬಿಸಿ

ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇಗುಲದ ನವರಾತ್ರಿ ಜಾತ್ರೆಗೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಹಿಂದೂಯೇತರ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದ್ದು, ಅದರ ಬಿಸಿ ಹಿಂದೂ ವ್ಯಾಪಾರಿಗಳಿಗೂ ತಟ್ಟಿದೆ.

ಮಂಗಳೂರು: ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇಗುಲದ ನವರಾತ್ರಿ ಜಾತ್ರೆಗೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಹಿಂದೂಯೇತರ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದ್ದು, ಅದರ ಬಿಸಿ ಹಿಂದೂ ವ್ಯಾಪಾರಿಗಳಿಗೂ ತಟ್ಟಿದೆ. 

ಜಾತ್ರೆ ಆರಂಭವಾಗಿ ಮೂರು ದಿನ ಕಳೆದರೂ ವ್ಯಾಪಾರ ಇನ್ನೂ ಚುರುಕುಗೊಂಡಿಲ್ಲ. ಪ್ರಸ್ತುತ ಅಹಿತಕರ ವಾತಾವರಣವನ್ನು ಗಮನಿಸಿದರೆ, ಉಳಿದ ದಿನಗಳಲ್ಲೂ ಪರಿಸ್ಥಿತಿ ಬದಲಾಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಅನೇಕ ಮಾರಾಟಗಾರರು ಭಾವಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವ್ಯಾಪಾರದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ನಾವು ಹಿಂದೆ ಸಾಕಷ್ಟು ಹಿಂದೂಯೇತರ ಗ್ರಾಹಕರನ್ನು ಪಡೆಯುತ್ತಿದ್ದೆವು. ಆದರೆ ಅವರ ಸಂಖ್ಯೆ ಈಗ ಕಡಿಮೆಯಾಗಿದೆ ಎಂದು ಶಿವಮೊಗ್ಗದ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಸಾಮಾನ್ಯವಾಗಿ, ಪಾದರಕ್ಷೆಗಳು, ಉಡುಪುಗಳು, ಅಲಂಕಾರಿಕ ವಸ್ತುಗಳು ಇತ್ಯಾದಿಗಳನ್ನು ಮಾರಾಟ ಮಾಡುವ ಮಳಿಗೆಗಳು ಜನರನ್ನು ಸೆಳೆಯುತ್ತವೆ. ಆದರೆ ಬಹುಪಾಲು ಹಿಂದೂಯೇತರ ಮಾರಾಟಗಾರರು ದೂರ ಉಳಿದಿರುವುದರಿಂದ, ಈ ವಸ್ತುಗಳಿಗೆ ಕೆಲವೇ ಕೆಲವು ಸ್ಟಾಲ್‌ಗಳಿವೆ, ಇದರಿಂದಾಗಿ ಜಾತ್ರೆ ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿಲ್ಲ ಎಂದಿದ್ದಾರೆ.

ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಹಾವೇರಿ ಜಿಲ್ಲೆಯ ಹಿರೂರಿನ ಸಂಜೀವ್ ಸೇರಿದಂತೆ ಹಲವು ಮಾರಾಟಗಾರರು ಈ ಬಾರಿ ವ್ಯಾಪಾರ ವಹಿವಾಟು ಮಂದವಾಗಿದೆ ಎಂದು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

SCROLL FOR NEXT