ವ್ಯಾಪಾರಿಗಳು 
ರಾಜ್ಯ

ಮಂಗಳೂರು: ಹಿಂದೂ ವ್ಯಾಪಾರಿಗಳಿಗೂ ತಟ್ಟಿದ ವಿಎಚ್‌ಪಿ ಬಹಿಷ್ಕಾರದ ಬಿಸಿ

ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇಗುಲದ ನವರಾತ್ರಿ ಜಾತ್ರೆಗೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಹಿಂದೂಯೇತರ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದ್ದು, ಅದರ ಬಿಸಿ ಹಿಂದೂ ವ್ಯಾಪಾರಿಗಳಿಗೂ ತಟ್ಟಿದೆ.

ಮಂಗಳೂರು: ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇಗುಲದ ನವರಾತ್ರಿ ಜಾತ್ರೆಗೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಹಿಂದೂಯೇತರ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದ್ದು, ಅದರ ಬಿಸಿ ಹಿಂದೂ ವ್ಯಾಪಾರಿಗಳಿಗೂ ತಟ್ಟಿದೆ. 

ಜಾತ್ರೆ ಆರಂಭವಾಗಿ ಮೂರು ದಿನ ಕಳೆದರೂ ವ್ಯಾಪಾರ ಇನ್ನೂ ಚುರುಕುಗೊಂಡಿಲ್ಲ. ಪ್ರಸ್ತುತ ಅಹಿತಕರ ವಾತಾವರಣವನ್ನು ಗಮನಿಸಿದರೆ, ಉಳಿದ ದಿನಗಳಲ್ಲೂ ಪರಿಸ್ಥಿತಿ ಬದಲಾಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಅನೇಕ ಮಾರಾಟಗಾರರು ಭಾವಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವ್ಯಾಪಾರದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ನಾವು ಹಿಂದೆ ಸಾಕಷ್ಟು ಹಿಂದೂಯೇತರ ಗ್ರಾಹಕರನ್ನು ಪಡೆಯುತ್ತಿದ್ದೆವು. ಆದರೆ ಅವರ ಸಂಖ್ಯೆ ಈಗ ಕಡಿಮೆಯಾಗಿದೆ ಎಂದು ಶಿವಮೊಗ್ಗದ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಸಾಮಾನ್ಯವಾಗಿ, ಪಾದರಕ್ಷೆಗಳು, ಉಡುಪುಗಳು, ಅಲಂಕಾರಿಕ ವಸ್ತುಗಳು ಇತ್ಯಾದಿಗಳನ್ನು ಮಾರಾಟ ಮಾಡುವ ಮಳಿಗೆಗಳು ಜನರನ್ನು ಸೆಳೆಯುತ್ತವೆ. ಆದರೆ ಬಹುಪಾಲು ಹಿಂದೂಯೇತರ ಮಾರಾಟಗಾರರು ದೂರ ಉಳಿದಿರುವುದರಿಂದ, ಈ ವಸ್ತುಗಳಿಗೆ ಕೆಲವೇ ಕೆಲವು ಸ್ಟಾಲ್‌ಗಳಿವೆ, ಇದರಿಂದಾಗಿ ಜಾತ್ರೆ ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿಲ್ಲ ಎಂದಿದ್ದಾರೆ.

ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಹಾವೇರಿ ಜಿಲ್ಲೆಯ ಹಿರೂರಿನ ಸಂಜೀವ್ ಸೇರಿದಂತೆ ಹಲವು ಮಾರಾಟಗಾರರು ಈ ಬಾರಿ ವ್ಯಾಪಾರ ವಹಿವಾಟು ಮಂದವಾಗಿದೆ ಎಂದು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT