ಡಾ.ಸುನೀಲ್ ರಾವ್ 
ರಾಜ್ಯ

ಪ್ಯಾಲೇಸ್ಟಿನ್ ವಿರುದ್ಧ ಟ್ವೀಟ್; ಮಂಗಳೂರಿನ ವೈದ್ಯ ಸುನಿಲ್ ರಾವ್ ಬಹ್ರೈನ್ ಆಸ್ಪತ್ರೆಯಿಂದ ವಜಾ

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ರಾಯಲ್ ಬಹ್ರೈನ್ ಆಸ್ಪತ್ರೆಯ ಇಂಟರ್ನಲ್‌ ಮೆಡಿಸಿನ್‌ ವಿಭಾಗದ ಮಂಗಳೂರು ಮೂಲದ ಡಾ.ಸುನೀಲ್ ರಾವ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಮಂಗಳೂರು: ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ರಾಯಲ್ ಬಹ್ರೈನ್ ಆಸ್ಪತ್ರೆಯ ಇಂಟರ್ನಲ್‌ ಮೆಡಿಸಿನ್‌ ವಿಭಾಗದ ಮಂಗಳೂರು ಮೂಲದ ಡಾ.ಸುನೀಲ್ ರಾವ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಗಾಝಾ ಪಟ್ಟಿ ಮೇಲೆ ಇಸ್ರೇಲ್ ಆಕ್ರಮಣದಿಂದ ಭಾರೀ ನಷ್ಟ ಆಗುತ್ತಿದ್ದು, ಈ ಕುರಿತು ಸುನೀಲ್ ರಾವ್ ಅವರು ಮಾಡಿದ್ದ ಪೋಸ್ಟ್ ಗಳು ಇಸ್ರೇಲ್‌ಗೆ ಬೆಂಬಲ ಸೂಚಿಸಿದ್ದವು.

ಪೋಸ್ಟ್ ಕುರಿತು ಸಾಮಾಜಿಕ ಜಾಲತಾಣ ಬಳಕೆದಾರರು ವರದಿ ಮಾಡಿದ ನಂತರ ಈ ವಿಚಾರ ಬಹ್ರೈನ್ ಅಧಿಕಾರಿಗಳ ಗಮನ ಸೆಳೆಯಿತು.

ಈ ಕುರಿತು ಆಸ್ಪತ್ರೆಯು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಡಾ. ರಾವ್ ಅವರ ಅಭಿಪ್ರಾಯಗಳು ವೈಯಕ್ತಿಕ ಮತ್ತು ಸಂಸ್ಥೆಯ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿ ಅಧಿಕೃತ ಹೇಳಿಕೆಯನ್ನು ನೀಡಿದೆ. ಜೊತೆಗೆ, ಅವರ ಹೇಳಿಕೆಗಳು ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿವೆ. ಆ ಕಾರಣಕ್ಕಾಗಿ ಅವರನ್ನು ತಕ್ಷಣದಿಂದಲೇ ಕೆಲಸದಿಂದ ವಜಾಗೊಳಿಸಲಾಯಿತು ಎಂದು ಹೇಳಿದೆ.

ತಮ್ಮ ಪೋಸ್ಟ್‌ ವಿವಾದ ಸ್ವರೂಪ ಪಡೆದುಕೊಂಡ ಬಳಿಕ, ಡಾ. ರಾವ್ ಅವರು, ಮತ್ತೊಂದು ಪೋಸ್ಟ್ ಮಾಡಿ ಕ್ಷಮೆಯಾಚಿಸಿದ್ದಾರೆ.

ಈ ವೇದಿಕೆಯಲ್ಲಿ ನಾನು ಪೋಸ್ಟ್ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸಲು ಬಯಸುತ್ತೇನೆ. ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ ನನ್ನ ಟ್ವೀಟ್ ಸಂವೇದನಾ ರಹಿತವಾಗಿತ್ತು. ಒಬ್ಬ ವೈದ್ಯನಾಗಿ ನಾನು ಎಲ್ಲಾ ಜೀವಗಳನ್ನು ಗೌರವಿಸುತ್ತೇನೆ. ನಾನು ಈ ದೇಶ, ಇಲ್ಲಿನ ಜನರು ಮತ್ತು ಅವರ ಧರ್ಮವನ್ನು ಆಳವಾಗಿ ಗೌರವಿಸುತ್ತೇನೆ. ನಾನು ಕಳೆದ 10 ವರ್ಷಗಳಿಂದ ಇಲ್ಲಿದ್ದೇನೆಂದು ಹೇಳಿದ್ದಾರೆ.

ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು(ಕೆಎಂಸಿ) ಹಾಗೂ ವಿಶಾಖಪಟ್ಟಣಂನ ಆಂಧ್ರ ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿ ಮಂಗಳೂರಿನ ಡಾ. ಸುನೀಲ್ ರಾವ್ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಸುಮಾರು 20 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಈಗಾಗಲೇ ಆಸ್ಪತ್ರೆಯ ಅಧಿಕೃತ ವೆಬ್‌ಸೈಟ್‌ನಿಂದ ಅವರ ಪ್ರೊಫೈಲ್ ಅನ್ನು ತೆಗೆದುಹಾಕಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT