ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶಿವರಾಜು 
ರಾಜ್ಯ

ಚಾಮರಾಜನಗರ: ಗ್ರಾಮದಿಂದ ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ, 17 ಮಂದಿ ವಿರುದ್ಧ ಪ್ರಕರಣ ದಾಖಲು

ತಮ್ಮ ಗ್ರಾಮದಿಂದ ಬಹಿಷ್ಕಾರದ ನಂತರ ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 17 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತರನ್ನು ಶಿವರಾಜು (45) ಎಂದು ಗುರುತಿಸಲಾಗಿದ್ದು, ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಯಡವನಹಳ್ಳಿಯಲ್ಲಿ ಘಟನೆ ನಡೆದಿದೆ.

ಚಾಮರಾಜನಗರ: ತಮ್ಮ ಗ್ರಾಮದಿಂದ ಬಹಿಷ್ಕಾರದ ನಂತರ ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 17 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 

ಮೃತರನ್ನು ಶಿವರಾಜು (45) ಎಂದು ಗುರುತಿಸಲಾಗಿದ್ದು, ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಯಡವನಹಳ್ಳಿಯಲ್ಲಿ ಘಟನೆ ನಡೆದಿದೆ.
ಸಂತ್ರಸ್ತರ ಕುಟುಂಬ, ಸ್ನೇಹಿತರು ಹಾಗೂ ಗ್ರಾಮಸ್ಥರು ಬೇಗೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಬಹಿಷ್ಕಾರಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪೊಲೀಸರು 17 ಜನರ ಮೇಲೆ ಪ್ರಕರಣ ದಾಖಲಿಸಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. 

ಶಿವಣ್ಣ ನಾಯ್ಕ ಎಂಬ ವ್ಯಕ್ತಿ ಚಪ್ಪಲಿಯಿಂದ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಗ್ರಾಮದ ಹಿರಿಯರು ಶಿವಣ್ಣ ನಾಯ್ಕಗೆ ಬಹಿಷ್ಕಾರ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಶಿವರಾಜು ಶಿವಣ್ಣ ನಾಯ್ಕ್ ಬಗ್ಗೆ ಸಹಾನುಭೂತಿ ಹೊಂದಿದ್ದರು. ಇದರಿಂದ ಕುಪಿತಗೊಂಡ ಹಿರಿಯರು, ಶಿವಣ್ಣ ನಾಯ್ಕ್ ಜೊತೆ ಶಿವರಾಜು ಕೂಡ ಕೈಜೋಡಿಸಿದ್ದಾರೆ ಎಂದು ಆರೋಪಿಸಿ ಅವರಿಗೂ ಬಹಿಷ್ಕಾರ ಹಾಕಿದ್ದಾರೆ ಮತ್ತು ಮತ್ತು 6,000 ರೂಪಾಯಿ ದಂಡವನ್ನೂ ವಿಧಿಸಿದ್ದಾರೆ.

ಈ ಅವಮಾನ ತಾಳಲಾರದೆ ಶಿವರಾಜು ನೇಣು ಬಿಗಿದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT