ಬಿಜೆಪಿ-ಕಾಂಗ್ರೆಸ್ 
ರಾಜ್ಯ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ದ ಅವಹೇಳನಕಾರಿ ಪೋಸ್ಟ್; ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಬಿಜೆಪಿಯ ಕರ್ನಾಟಕ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಪೊಲೀಸರಿಗೆ ದೂರು ನೀಡಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಬಿಜೆಪಿಯ ಕರ್ನಾಟಕ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಪೊಲೀಸರಿಗೆ ದೂರು ನೀಡಿದೆ.

ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ 94 ಕೋಟಿ ರೂ. ನಗದು ಮತ್ತು 8 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕಾಂಗ್ರೆಸ್‌ಗೆ ಸೇರಿದ್ದು ಎಂದು ಬಿಜೆಪಿಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಬಿಂಬಿಸಿದೆ ಎಂದು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಹೇಳಿದ್ದಾರೆ.

ಬಿಜೆಪಿಯವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಚಿತ್ರಗಳನ್ನು ತಿರುಚಿ ಕಳಪೆಯಾಗಿ ಬಿಂಬಿಸಿ ಜನರಲ್ಲಿ ಗೊಂದಲ ಮೂಡಿಸಿದ್ದಾರೆ ಎಂದು ದೂರಿದ್ದಾರೆ.

ಟ್ವಿಟರ್‌ನಲ್ಲಿನ ಕರ್ನಾಟಕ ಬಿಜೆಪಿ ಘಟಕದ ಮಾನಹಾನಿಕರ ಪೋಸ್ಟ್‌ಗಳನ್ನು ಅನೇಕ ಬಿಜೆಪಿ ನಾಯಕರು ಸಹ ಹಂಚಿಕೊಂಡಿದ್ದಾರೆ ಎಂದು ಮುಕುಂದರಾಜ್ ಆರೋಪಿಸಿದ್ದಾರೆ.

'ಐಟಿ ಇಲಾಖೆಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಾನು ವಶಪಡಿಸಿಕೊಂಡ ನಗದು ಸಚಿವರು ಅಥವಾ ಯಾವುದೇ ನಿರ್ದಿಷ್ಟ ವ್ಯಕ್ತಿಗೆ ಸೇರಿದ್ದು ಎಂದು ಎಲ್ಲಿಯೂ ಹೇಳಿಲ್ಲ. ತನಿಖೆ ಪೂರ್ಣಗೊಳ್ಳುವ ಮೊದಲೇ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ಹರಡಲು ಪ್ರಾರಂಭಿಸಿದೆ' ಎಂದು ಕಾಂಗ್ರೆಸ್ ನಾಯಕ ತಮ್ಮ ದೂರಿನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TMC ಬಂಡಾಯ ಬಣದಲ್ಲಿ 20 ಅಲ್ಲ, 22 ಸಂಸದರು: ಮಮತಾ ಬ್ಯಾನರ್ಜಿಗೆ ಮಹಾಘಾತ; LS ಸ್ಪೀಕರ್ ಭೇಟಿಗೂ ಮುನ್ನ ಮಹತ್ವದ ಸಭೆ!

ರಾಜ್ಯಸಭೆಯಲ್ಲಿ 3ನೇ 2ರಷ್ಟು ಬಹುಮತಕ್ಕೆ NDA ಹತ್ತಿರ: TMC ಬಂಡಾಯದ ಹೊರತಾಗಿಯೂ ಲೋಕಸಭೆಯಲ್ಲಿ ಇಲ್ಲ ಸಂಖ್ಯಾ ಬಲ!

ನಾಚಿಕೆಗೇಡು: 'Asian Games ಕ್ರೀಡಾಕೂಟ ವೆಚ್ಚ ನೀವೇ ಭರಿಸಿ': ಆಟಗಾರರಿಗೆ ಶಾಕ್ ಕೊಟ್ಟ ಪಾಕಿಸ್ತಾನ

'ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ': ಗೃಹ ಲಕ್ಷ್ಮಿ, ಗೃಹ ಜ್ಯೋತಿ ಖಾತರಿಗಳನ್ನು ನಿಲ್ಲಿಸಲ್ಲ, ಆತಂಕ ಬೇಡ: ಡಿಕೆ ಶಿವಕುಮಾರ್

ವಿವಾದಾತ್ಮಕ ಹೇಳಿಕೆ: 'ತಿಕ್ಕಲುತನ'.. ಭಗವಾನ್ ವಿರುದ್ಧ ಕೇಸ್ ದಾಖಲು, ಉಗ್ರಪ್ಪ ಕೂಡ ಕೆಂಡಾಮಂಡಲ!

SCROLL FOR NEXT