ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಸರ್ಕಾರದಿಂದ ನೇಕಾರರಿಗೆ ದಸರಾ ಉಡುಗೊರೆ: ಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌

ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿರುವ ನೇಕಾರರಿಗೆ ದಸರಾ ಉಡುಗೊರೆ ನೀಡಿದ್ದು, ಕೈಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌ ನೀಡುವಂತೆ ಆದೇಶ ಹೊರಡಿಸಿದೆ.

ವಿಜಯಪುರ: ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿರುವ ನೇಕಾರರಿಗೆ ದಸರಾ ಉಡುಗೊರೆ ನೀಡಿದ್ದು, ಕೈಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌ ನೀಡುವಂತೆ ಆದೇಶ ಹೊರಡಿಸಿದೆ.

10 ಎಚ್​ಪಿವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ತಿಂಗಳಿಗೆ ಗರಿಷ್ಠ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಜವಳಿ ಸಚಿವ ಶಿವಾನಂದ ‌ಪಾಟೀಲ್ ಅವರು ಶನಿವಾರ​ ಹೇಳಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇಕಾರರಿಗೆ ಇದರಿಂದ ದೊಡ್ಡ ಅನುಕೂಲವಾಗಲಿದೆ. ಚುನಾವಣೆಯಲ್ಲಿ ಘೋಷಿಸಿರುವುದನ್ನು ನಮ್ಮ ಸರ್ಕಾರ ಕಾರ್ಯರೂಪಕ್ಕೆ ತಂದಿದೆ ಎಂದರು.

ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಲು ಸರ್ಕಾರ ಕ್ರಮಕೈಗೊಂಡಿದೆ. ಈ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್‌ ನೀಡಲು ಮುಂದಾಗಿದೆ ಎಂದರು.

ಈ ಯೋಜನೆ ಅನುಷ್ಠಾನದಿಂದ ರಾಜ್ಯದ ಸುಮಾರು 40 ಸಾವಿರ ನೇಕಾರರಿಗೆ ಅನುಕೂಲವಾಗಲಿದೆ. ನೇಕಾರರಿಗೆ ಉಚಿತ ವಿದ್ಯುತ್‌ ಪೂರೈಕೆಯಿಂದ ಮಾಸಿಕ ಅಂದಾಜು 150 ಕೋಟಿ ರೂ. ಅನ್ನು ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಭರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

10 ರಿಂದ 20 ಎಚ್‌.ಪಿ. ವರೆಗಿನ ವಿದ್ಯುತ್‌ ಮಗ್ಗ ಹಾಗೂ ಮಗ್ಗಪೂರ್ವ ಘಟಕಗಳಿಗೆ ಪ್ರತಿ ಯುನಿಟ್‌ಗೆ 1.25 ರೂ. ಯಂತೆ ರಿಯಾಯಿತಿ ದರದಲ್ಲಿ ಮಾಸಿಕ ಗರಿಷ್ಠ 500 ಯುನಿಟ್‌ ವರೆಗೆ ವಿದ್ಯುತ್‌ ಪೂರೈಸಲಾಗುವುದು ಎಂದುಶಿವಾನಂದ ‌ಪಾಟೀಲ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್