ಮಡ್ ಪೈಪ್ ಕೆಫೆಯಲ್ಲಿ ಭಾರಿ ಅಗ್ನಿಅವಘಡ 
ರಾಜ್ಯ

ಬೆಂಗಳೂರಿನಲ್ಲಿ ಸರಣಿ ಅಗ್ನಿ ಅವಘಡ ಘಟನೆ ಬಳಿಕ ಎಚ್ಚೆತ್ತ ಪಾಲಿಕೆ: ಸುರಕ್ಷತೆ ಇಲ್ಲದ 12 ಪಬ್, ಬಾರ್'ಗಳಿಗೆ ಬೀಗ!

ನಗರದಲ್ಲಿ ಸಂಭವಿಸಿದ ಸರಣಿ ಅಗ್ನಿ ಅವಘಡ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರಂತೆ ಅಗ್ನಿ ಸುರಕ್ಷತೆ ಇಲ್ಲದ 12 ಪಬ್ ಹಾಗೂ ಬಾರ್ ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ಗಳನ್ನು ಜಾರಿಗೊಳಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಸಂಭವಿಸಿದ ಸರಣಿ ಅಗ್ನಿ ಅವಘಡ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರಂತೆ ಅಗ್ನಿ ಸುರಕ್ಷತೆ ಇಲ್ಲದ 12 ಪಬ್ ಹಾಗೂ ಬಾರ್ ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ಗಳನ್ನು ಜಾರಿಗೊಳಿಸಿದ್ದಾರೆ.

ಕಳೆದ ಬುಧವಾರ ಕೋರಮಗಲದ ಫೋರಂ ಮಾಲ್ ಸಮೀಪದ ಕೆಫೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ, ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವಂತೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಅವರು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಬಿಬಿಎಂಪಿಯ ಎಲ್ಲಾ ವಲಯದ ಆರೋಗ್ಯಾಧಿಕಾರಿಗಳು ನಗರದ ಪ್ರತಿಯೊಂದು ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗೆ ಭೇಟಿ ನೀಡಿ, ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ ನಗರದಲ್ಲಿ ಒಟ್ಟು 232 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಪರಿಶೀಲಿಸಿದ್ದು, ಈ ಪೈಕಿ 86 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಕಂಡ ಬಂದಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಿದ್ದಾರೆ. ಜೊತೆಗೆ 12 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಬಂದ್ ಮಾಡಿಸಿದ್ದಾರೆ.

ಬಿಬಿಎಂಪಿ ಆರೋಗ್ಯ ಇಲಾಖೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಎಎಸ್ ಅವರು ಮಾತನಾಡಿ, ಈ ಕಾರ್ಯಾಚರಣೆಯು ಒಂದು ವಾರಗಳ ಕಾಲ ಮುಂದುವರಿಯಲಿದೆ. ನಗರದ ಎಂಟು ವಲಯಗಳಲ್ಲಿರುವ ಎಲ್ಲಾ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಪರಿಶೀಲಿಸುತ್ತೇವೆ ಮತ್ತು ಲೋಪಗಳು ಕಂಡುಬಂದರೆ ಮತ್ತು ವ್ಯವಹಾರಗಳು ಬಿಬಿಎಂಪಿ ಪರವಾನಗಿ ನಿಯಮಗಳನ್ನು ಅನುಸರಿಸದಿದ್ದರೆ, ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,118 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಪರವಾನಗಿ ನೀಡಲಾಗಿದ್ದು, ಶುಕ್ರವಾರ 232 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಇತರೆ ಇನ್ನು ಕೆಲವೇ ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT