ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಮಾಜಿ ಸಿಎಂ ಬೊಮ್ಮಾಯಿ ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ, ಇನ್ನು 4 ವಾರಗಳಲ್ಲಿ ಹೊರಗೆ ಓಡಾಡಬಹುದು: ವೈದ್ಯರು

ಕಳೆದ ಸೋಮವಾರ ಮೊಣಕಾಲಿನ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸ ಮತ್ತು ಧೈರ್ಯದ ಮನೋಭಾವದಿಂದ ಅಚ್ಚರಿಯ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್ ಗ್ರೂಪ್ ಆಸ್ಪತ್ರೆಗಳ ಕಾರ್ಡಿಯೋಥೊರಾಸಿಕ್ ಸೈನ್ಸ್ ಮುಖ್ಯಸ್ಥ ಡಾ ವಿವೇಕ್ ಜವಳಿ ಹೇಳುತ್ತಾರೆ. 

ಬೆಂಗಳೂರು: ಕಳೆದ ಸೋಮವಾರ ಮೊಣಕಾಲಿನ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸ ಮತ್ತು ಧೈರ್ಯದ ಮನೋಭಾವದಿಂದ ಅಚ್ಚರಿಯ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್ ಗ್ರೂಪ್ ಆಸ್ಪತ್ರೆಗಳ ಕಾರ್ಡಿಯೋಥೊರಾಸಿಕ್ ಸೈನ್ಸ್ ಮುಖ್ಯಸ್ಥ ಡಾ ವಿವೇಕ್ ಜವಳಿ ಹೇಳುತ್ತಾರೆ. 

ಬೊಮ್ಮಾಯಿ ಅವರ ಪರಿಧಮನಿಯ ಅಪಧಮನಿಗಳಲ್ಲಿ ಅನೇಕ ಬ್ಲಾಕ್‌ಗಳನ್ನು ಹೊಂದಿದ್ದರಿಂದ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸುವಲ್ಲಿನ ಸವಾಲಿನ ಬಗ್ಗೆ ವೈದ್ಯರು ಮಾತನಾಡಿದ್ದಾರೆ. ಶಸ್ತ್ರಚಿಕಿತ್ಸೆ ಸರಾಗವಾಗಿ ಸಾಗಿತು.  ಅವರ ರೋಗಲಕ್ಷಣಗಳನ್ನು ಕಂಡಾಗ ಅನೇಕ ಸಮಸ್ಯೆಗಳು ಎದುರಾಗಬಹುದು ಎಂದು ಭಾವಿಸಿಕೊಂಡಿದ್ದೆ ಎಂದಿದ್ದಾರೆ.

ಹಾಗಾದರೆ ಬೊಮ್ಮಾಯಿ ಅವರು ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಆಗಲು ಎಷ್ಟು ಸಮಯ ಹಿಡಿಯಬಹುದು ಎಂದು ಕೇಳಿದಾಗ, ಅತಿ ಗಣ್ಯ ವ್ಯಕ್ತಿಗಳು ಅತ್ಯುನ್ನತ ಆರೈಕೆಗಾಗಿ ಮತ್ತು ಅತಿಯಾಗಿ ಸಂದರ್ಶಕರು ಭೇಟಿ ಮಾಡಿ ಅವರಿಗೆ ಸಮಸ್ಯೆಯಾಗುವುದನ್ನು ತಪ್ಪಿಸಲು ಐಸಿಯುನ ಫೋರ್ಟ್ ನಾಕ್ಸ್‌ನಲ್ಲಿ ಹೆಚ್ಚು ಸಮಯ ಕಳೆಯುವುದು ಸೂಕ್ತವಾಗಿರುತ್ತದೆ. ವಿವಿಐಪಿಗಳು ಮಾತ್ರ ಈಗ ಅವರನ್ನು ಭೇಟಿ ಮಾಡುತ್ತಿದ್ದಾರೆ ಎಂದರು. ಮೊನ್ನೆ ಮತ್ತು ನಿನ್ನೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಮುಂದಿನ ದಿನಗಳಲ್ಲಿ ಬೊಮ್ಮಾಯಿ ಅವರು ಯಾವ ರೀತಿ ಭಾಗವಹಿಸಬಹುದು ಎಂದು ಕೇಳಿದಾಗ ವೈದ್ಯರು, ಇದುವರೆಗೆ ಶಸ್ತ್ರಚಿಕಿತ್ಸೆಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಸುಮಾರು ಎರಡು ವಾರಗಳಲ್ಲಿ, ಅವರು ಕಚೇರಿ ಮತ್ತು ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಬಹುದು. ಇನ್ನು ಸುಮಾರು ನಾಲ್ಕು ವಾರಗಳಲ್ಲಿ ಅವರು ಹೊರಗೆ ಓಡಾಡಿ ಚಟುವಟಿಕೆಗಳಲ್ಲಿ ಭಾಗಿಯಾಗಬಹುದು ಎನ್ನುತ್ತಾರೆ.

ನವೆಂಬರ್ ಅಂತ್ಯದ ವೇಳೆಗೆ ಪಕ್ಷದ ಕಾರ್ಯಕ್ರಮಗಳಿಗೆ ಬೊಮ್ಮಾಯಿ ಅವರು ಲಭ್ಯವಿರುತ್ತಾರೆ. ಡಿಸೆಂಬರ್ 3 ರಂದು ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಸಂಸತ್ತಿನ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳು ಪ್ರಾರಂಭವಾಗುತ್ತವೆ. 

ಮುಂದಿನ ದಿನಗಳಲ್ಲಿ ಬೊಮ್ಮಾಯಿ ಅವರು ಮೊದಲು ಸಮಾಲೋಚನೆ ನಡೆಸಿರುವ ಸ್ಪರ್ಶ ಆಸ್ಪತ್ರೆಯಲ್ಲಿ ಮೂಳೆಚಿಕಿತ್ಸೆಯ ವೈದ್ಯರ ಅಭಿಪ್ರಾಯವನ್ನು ಪಡೆಯಬಹುದು ಎಂದು ಬೊಮ್ಮಾಯಿ ಅವರ ನಿಕಟ ಮೂಲಗಳು ತಿಳಿಸಿವೆ. ದಸರಾ ಹಬ್ಬ ಆಚರಿಸಲು ಬೊಮ್ಮಾಯಿ ಮನೆಗೆ ಮರಳಲು ಸಾಧ್ಯವಾಗಿದ್ದರೂ, ಅವರ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿ ಉಳಿಯಲು ಸಲಹೆ ನೀಡಿದ್ದಾರೆ.

ನಾಳೆ ಆಯುಧಪೂಜೆ ಮತ್ತು ನಾಡಿದ್ದು ವಿಜಯ ದಶಮಿ ಆಚರಿಸಲು ಅವರು ನಾಳೆ ಮನೆಗೆ ಮರಳುವ ಸಾಧ್ಯತೆಯಿದೆ. ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗುವವರಿಗೆ ಆಹಾರದ ನಿರ್ಬಂಧಗಳ ಬಗ್ಗೆ ಕೇಳಿದಾಗ ಜೀವನದುದ್ದಕ್ಕೂ ಔಷಧಿಯಲ್ಲಿರಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT