ಸಾಂದರ್ಭಿಕ ಚಿತ್ರ 
ರಾಜ್ಯ

ಕ್ರಿಪ್ಟೋಕರೆನ್ಸಿ ಕಂಪನಿ ಹೆಸರಲ್ಲಿ ವಂಚನೆ; ಅಪ್ಪ ಮಗ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಜಿಜಿಒ ಹೆಸರಿನ ಕ್ರಿಪ್ಟೋಕರೆನ್ಸಿ ಸಂಸ್ಥೆಯಲ್ಲಿ ಮೋಸದ ಹೂಡಿಕೆ ಯೋಜನೆ ಮೂಲಕ ಸಾರ್ವಜನಿಕರಿಗೆ ವಂಚಿಸಿದ ಆರೋಪದ ಮೇಲೆ ಅಪ್ಪ ಮತ್ತು ಮಗ ಸೇರಿದಂತೆ ಮೂವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜಿಜಿಒ ಹೆಸರಿನ ಕ್ರಿಪ್ಟೋಕರೆನ್ಸಿ ಸಂಸ್ಥೆಯಲ್ಲಿ ಮೋಸದ ಹೂಡಿಕೆ ಯೋಜನೆ ಮೂಲಕ ಸಾರ್ವಜನಿಕರಿಗೆ ವಂಚಿಸಿದ ಆರೋಪದ ಮೇಲೆ ಅಪ್ಪ ಮತ್ತು ಮಗ ಸೇರಿದಂತೆ ಮೂವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ಸತೀಶ್, ಅವರ ಪುತ್ರ ಶ್ರೀಕಾಂತ್ ಮತ್ತು ದೀಪಕ್ ಎಂಬುವವರು ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಜಿಜಿ ಆನ್‌ಲೈನ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯನ್ನು ನಡೆಸುತ್ತಿದ್ದರು. ಹೆಚ್ಚಿನ ಆದಾಯ ನೀಡುವುದಾಗಿ ಭರವಸೆ ನೀಡಿ 1,300 ಮಂದಿಗೆ 5-6 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಜಿಜಿಒ ಕಂಪನಿಯ ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಮಾಡುವಂತೆ ಮಾಡಲಾಗಿದೆ. ಜಿಜಿಒ ಕಂಪನಿಯು ಅಂತಾರಾಷ್ಟ್ರೀಯ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರಗಳಲ್ಲಿ ಪಟ್ಟಿಮಾಡಿದರೆ ಬಿಟ್‌ಕಾಯಿನ್‌ಗೆ ಹೋಲಿಸಬಹುದಾದ, ಹೆಚ್ಚು ಬೆಲೆಬಾಳುವ ಸಾಮರ್ಥ್ಯವನ್ನು ಹೊಂದಿದೆ. ಇದು ಹೆಚ್ಚಿನ ಆದಾಯ ನೀಡುತ್ತದೆ ಎಂದು ಜನರನ್ನು ಆಕರ್ಷಿಸಿದ್ದಾರೆ ಎಂದು ಪೊಲೀಸರು ಹೇಳಿದರು.

'ಆರೋಪಿಗಳು ಹೂಡಿಕೆದಾರರ ನಂಬಿಕೆಯನ್ನು ಗಳಿಸಿದರು. ಅವರ ಹೂಡಿಕೆಗಳಿಗೆ ಪ್ರತಿಫಲವಾಗಿ ಆರಂಭದಲ್ಲಿ ಪ್ರತಿದಿನ ಶೇ 15 ರಷ್ಟು ಆದಾಯ ಪಾವತಿಸಿದ್ದಾರೆ. ಹೂಡಿಕೆದಾರರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಈ ಯೋಜನೆಯನ್ನು ಪ್ರಚಾರ ಮಾಡಿದ ನಂತರ, ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಸಂಬಂಧಿಕರು ಹೂಡಿಕೆ ಮಾಡಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಸಂಬಂಧ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT