ಪ್ರಶಸ್ತಿ ಗೆದ್ದಿರುವ ವಿಹಾನ್ ಅವರ ಫೋಟೊ 
ರಾಜ್ಯ

ಲಂಡನ್‌ನಲ್ಲಿ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪಡೆದ ಬೆಂಗಳೂರಿನ 10 ವರ್ಷದ ಬಾಲಕ ವಿಹಾನ್!

ಲಂಡನ್‌ನಲ್ಲಿ ನಡೆದ ವರ್ಷದ ಪ್ರತಿಷ್ಠಿತ ವನ್ಯಜೀವಿ ಛಾಯಾಗ್ರಾಹಕ (ಡಬ್ಲ್ಯುಪಿವೈ) ವಿಭಾಗದ ಸ್ಪರ್ಧೆಯಲ್ಲಿ ಬೆಂಗಳೂರಿನ 10 ವರ್ಷದ ವಿಹಾನ್ ತಾಳ್ಯ ವಿಕಾಸ್ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ಬೆಂಗಳೂರು: ಲಂಡನ್‌ನಲ್ಲಿ ನಡೆದ ವರ್ಷದ ಪ್ರತಿಷ್ಠಿತ ವನ್ಯಜೀವಿ ಛಾಯಾಗ್ರಾಹಕ (ಡಬ್ಲ್ಯುಪಿವೈ) ವಿಭಾಗದ ಸ್ಪರ್ಧೆಯಲ್ಲಿ ಬೆಂಗಳೂರಿನ 10 ವರ್ಷದ ವಿಹಾನ್ ತಾಳ್ಯ ವಿಕಾಸ್ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ಲಂಡನ್‌ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಆಯೋಜಿಸಿದ್ದ ಸ್ಪರ್ಧೆಯು ಪ್ರಪಂಚದಾದ್ಯಂತದ ಅತ್ಯುತ್ತಮ ವನ್ಯಜೀವಿ ಛಾಯಾಗ್ರಹಣವನ್ನು ಪ್ರದರ್ಶಿಸುತ್ತದೆ. ಈ ಕಾರ್ಯಕ್ರಮವನ್ನು ‘ಆಸ್ಕರ್ ಆಫ್ ಛಾಯಾಗ್ರಹಣ’ ಎಂದೂ ಪರಿಗಣಿಸಲಾಗಿದೆ. ವಿಹಾನ್ ಅವರ ನಗರದ ಹೊರವಲಯದಲ್ಲಿ ಕ್ಲಿಕ್ ಮಾಡಿದ ಜೇಡದ ಜೊತೆಗೆ ಕೃಷ್ಣನ ಕೆತ್ತನೆಯಿರುವ ಕಲ್ಲಿನ ಫೋಟೊವು ಪ್ರಶಸ್ತಿ ಗೆಲ್ಲಲು ಸಹಾಯ ಮಾಡಿದೆ.

ವನ್ಯಜೀವಿ ಛಾಯಾಗ್ರಹಣದಲ್ಲಿ ತಮ್ಮ ತಂದೆಯಿಂದ ಸ್ಫೂರ್ತಿ ಪಡೆದ ವಿಹಾನ್, 'ಈ ಪ್ರಶಸ್ತಿಯನ್ನು ಸ್ವೀಕರಿಸಲು ನಾನು ತುಂಬಾ ಸಂತೋಷ ಮತ್ತು ಉತ್ಸುಕನಾಗಿದ್ದೇನೆ. ನಾನು ಛಾಯಾಗ್ರಹಣ ಮಾಡಲು ಇಷ್ಟಪಡುತ್ತೇನೆ. ಏಕೆಂದರೆ, ಇದು ನಮಗೆ ಸೃಜನಾತ್ಮಕವಾಗಿ ಯೋಚಿಸಲು ಮತ್ತು ಪ್ರಕೃತಿಯೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡುತ್ತದೆ' ಎನ್ನುತ್ತಾರೆ.

ವಿಹಾನ್ ತಾಳ್ಯ ವಿಕಾಸ್

ಈ ವರ್ಷದ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ 95 ದೇಶಗಳಿಂದ ಭಾಗವಹಿಸಲಿದ್ದರು. ಒಟ್ಟು 50,000 ಚಿತ್ರಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಟಾಪ್ 100 ಅನ್ನು ಸ್ಪರ್ಧೆಗೆ ಪರಿಗಣಿಸಲಾಯಿತು ಮತ್ತು 11 ಅನ್ನು ವಿವಿಧ ವಿಭಾಗಗಳಲ್ಲಿ ಆಯ್ಕೆ ಮಾಡಲಾಯಿತು. ವಿಹಾನ್ 10 ವರ್ಷದೊಳಗಿನವರ ವಿಭಾಗದ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ವಿಹಾನ್ ಅವರ ಚಿತ್ರವು WPY59 ಸಂಗ್ರಹದ ಭಾಗವಾಗಲಿದೆ ಮತ್ತು ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂನಲ್ಲಿ ವರ್ಷದ ವನ್ಯಜೀವಿ ಛಾಯಾಗ್ರಾಹಕ ಪ್ರದರ್ಶನದಲ್ಲಿ ಪ್ರಸ್ತುತಪಡಿಸಲಾಗುತ್ತದೆ. ಇದು ವನ್ಯಜೀವಿಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 4 ಖಂಡಗಳಲ್ಲಿ ಸುಮಾರು 25 ಸ್ಥಳಗಳಲ್ಲಿ ಪ್ರವಾಸ ಮಾಡುತ್ತದೆ.

ಕುಮಾರನ್ಸ್ ಶಾಲೆಯ ವಿದ್ಯಾರ್ಥಿಯಾಗಿರುವ ವಿಹಾನ್ ಅವರ ಫೋಟೊ ಪ್ರಯಾಣವು 7ನೇ ವಯಸ್ಸಿನಲ್ಲಿ ಅವರ ತಂದೆಯ ಮಾರ್ಗದರ್ಶನದಲ್ಲಿ ಪ್ರಾರಂಭವಾಯಿತು.

ವನ್ಯಜೀವಿ ಮತ್ತು ಸಂರಕ್ಷಣಾ ಛಾಯಾಗ್ರಾಹಕ ಮತ್ತು ಸ್ಪರ್ಧೆಯ ಜಡ್ಜ್ ಆಗಿದ್ದ ಧೃತಿಮಾನ್ ಮುಖರ್ಜಿ ಮಾತನಾಡಿ, 'ವಿಹಾನ್ ಅವರ ಚಿತ್ರವು ಕಲೆ, ಪರಿಕಲ್ಪನೆ, ಸಂರಕ್ಷಣೆ ಮತ್ತು ವಿಜ್ಞಾನದ ಉದ್ದೇಶವನ್ನು ಬಹಳ ಚೆನ್ನಾಗಿ ಪೂರೈಸಿದೆ' ಎಂದು ಹೇಳಿದರು. ಚಿತ್ರದ ಹಿಂದಿನ ಚಿಕ್ಕ ಹುಡುಗನ ಆಲೋಚನಾ ಕ್ರಮ ಮತ್ತು ಚಿತ್ರದ ಸಂಯೋಜನೆಯನ್ನು ಅವರು ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದಲ್ಲಿ ಇಂಧನ ಬಿಕ್ಕಟ್ಟು: ರಾಜ್ಯಗಳ ಮುಖ್ಯಮಂತ್ರಿ ಜೊತೆಗೆ ಪ್ರಧಾನಿ ಮೋದಿ ಸಭೆ, ಸಿಎಂ ಸಿದ್ದರಾಮಯ್ಯ ಗೈರು!

ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video

ಕೇರಳ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಡಿಕೆಶಿಗೆ ಸ್ಥಾನ, ಸಿಎಂ ಸಿದ್ದರಾಮಯ್ಯಗೆ ಇಲ್ಲ!

MS Dhoniಗೆ ಹೇಳೋಕೆ ನೀವ್ಯಾರು..?: ಕೊನೆಗೂ ಧೋನಿ ಬೆನ್ನಿಗೆ ನಿಂತ Yograj Singh, ಈ ಬಾರಿ ಯಾರಿಗೆ ಚಾಟಿ?

IPL 2026: RCB vs SRH, ಆಸ್ಟ್ರೇಲಿಯಾದ ಈ ಸ್ಟಾರ್ ವೇಗಿ ಆಡಲ್ಲ! ಫ್ಯಾನ್ಸ್ ಗೆ ನಿರಾಸೆ

SCROLL FOR NEXT