ಸಾಂದರ್ಭಿಕ ಚಿತ್ರ 
ರಾಜ್ಯ

ಲಂಕಾ ಮಾನವ ಕಳ್ಳಸಾಗಣೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧಿಸಿದ ರಾಷ್ಟ್ರೀಯ ತನಿಖಾ ದಳ

ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಇಮ್ರಾನ್ ಖಾನ್ ಅಲಿಯಾಸ್ ಹಾಜಾ ನಜರ್ಬೀಡೆನ್ (39) ನನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಬ್ಸ್ಕಾಂಡರ್ ಟ್ರ್ಯಾಕಿಂಗ್ ತಂಡ (ಎಟಿಟಿ)  ಬಂಧಿಸಿದೆ

ಬೆಂಗಳೂರು: ಶ್ರೀಲಂಕಾದ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಇಮ್ರಾನ್ ಖಾನ್ ಅಲಿಯಾಸ್ ಹಾಜಾ ನಜರ್ಬೀಡೆನ್ (39) ನನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಬ್ಸ್ಕಾಂಡರ್ ಟ್ರ್ಯಾಕಿಂಗ್ ತಂಡ (ಎಟಿಟಿ)   ಬಂಧಿಸಿದೆ

ತಮಿಳುನಾಡಿನ ಥೇಣಿ ಜಿಲ್ಲೆಯ ಅಜ್ಞಾತ ಸ್ಥಳದಲ್ಲಿ ಈತನನ್ನು ಸೆರೆ ಹಿಡಿದಿದೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಖಾನ್ ಪ್ರಾಥಮಿಕ ತನಿಖೆಯಲ್ಲಿ ಕುಖ್ಯಾತ ಕಳ್ಳಸಾಗಾಣಿಕೆದಾರ ಎಂದು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

ಇಮ್ರಾನ್ ಖಾನ್ ಜೂ.2021ರಿಂದ ಪರಾರಿಯಾಗಿದ್ದ. ಎನ್‌ಐಎ ಬೆಂಗಳೂರು ಶಾಖೆಯ ಎಟಿಟಿ ಕಳೆದ ಹಲವು ತಿಂಗಳುಗಳಿಂದ ಆತನ ಚಲನವಲನಗಳ ಮೇಲೆ ನಿಗಾ ಇರಿಸಿತ್ತು. ಈತ ತಮಿಳುನಾಡಿನ ರಾಮನಾಥಪುರಂ ನಿವಾಸಿ. ಈ ಪ್ರದೇಶದಲ್ಲಿ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಈತ ಕುಖ್ಯಾತ ಮಾನವ ಕಳ್ಳಸಾಗಾಣಿಕೆದಾರ ಎಂಬುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಎನ್ಐಎ ಹೇಳಿದೆ.

ಇಮ್ರಾನ್ ಖಾನ್, ಶ್ರೀಲಂಕಾದ ಪ್ರಜೆ ಈಶನ್ ಎಂಬಾತನ ಸಹಯೋಗದೊಂದಿಗೆ ಈ ಹಿಂದೆ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ನೊಂದಿಗೆ ಸಂಬಂಧ ಹೊಂದಿದ್ದ. 38 ಶ್ರೀಲಂಕಾ ಪ್ರಜೆಗಳನ್ನು ಅವರ ತಾಯ್ನಾಡಿನಿಂದ ತಮಿಳುನಾಡಿನ ವಿವಿಧ ಸ್ಥಳಗಳಿಗೆ ಅಕ್ರಮವಾಗಿ ಸಾಗಿಸಲು ಯೋಜನೆ ರೂಪಿಸಿದ್ದ.

ಶ್ರೀಲಂಕಾದ ಪ್ರಜೆಗಳಿಗೆ ಕೆನಡಾಕ್ಕೆ ವಲಸೆ ಹೋಗಲು ಕಾನೂನುಬದ್ಧ ದಾಖಲಾತಿ ಮತ್ತು ಉದ್ಯೋಗಾವಕಾಶ ನೀಡುವ ಆಮಿಷ ಒಡ್ಡಿದ್ದ. ಇತರ ಆರೋಪಿಗಳ ನೆರವಿನಿಂದ ಅವರನ್ನು ಅವರ ತಾಯ್ನಾಡಿನಿಂದ ಬೆಂಗಳೂರು ಮತ್ತು ಮಂಗಳೂರಿನ ವಿವಿಧ ಸ್ಥಳಗಳಿಗೆ ಸಾಗಿಸುತ್ತಿದ್ದ. ತರುವಾಯ ಇತರ ರಾಷ್ಟ್ರಗಳಿಗೆ ಸಾಗಿಸುತ್ತಿದ್ದ. ಅಂತರರಾಷ್ಟ್ರೀಯ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಪ್ರಮುಖ ವ್ಯಕ್ತಿ ಎಂದು ತನಿಖೆ ಸಂಸ್ಥೆ ಬಹಿರಂಗಪಡಿಸಿದೆ.

 ಅ.5 2021 ರಂದು ದಿನಕರನ್, ವಿಶ್ವನಾಥನ್, ರಸೂಲ್, ಸತಮ್ ಉಷೇನ್ ಮತ್ತು ಅಬ್ದುಲ್ ಮುಹೀತು ಎಂಬ ಐವರು ಭಾರತೀಯ ಆರೋಪಿಗಳ ವಿರುದ್ಧ ಎನ್‌ಐಎ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ಈವರೆಗೆ ಒಟ್ಟು 13 ಶಂಕಿತರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT