ಪ್ರಾತಿನಿಧಿಕ ಚಿತ್ರ 
ರಾಜ್ಯ

ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರ ನಿರಾಸಕ್ತಿ: ಸರ್ಕಾರದಿಂದ ಗಡುವು ವಿಸ್ತರಣೆ ಸಾಧ್ಯತೆ

2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ. 

ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ. 

ರಾಜ್ಯದಲ್ಲಿ ನೋಂದಣಿಯಾಗಿರುವ 2 ಕೋಟಿ ಹಳೆಯ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ 10ಕ್ಕಿಂತ ಕಡಿಮೆ) ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್‌ ಅಳವಡಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಟಿಎನ್ಐಇ ಜೊತೆಗೆ ಮಾತನಾಡಿದ ಹಿರಿಯ ಸಾರಿಗೆ ಅಧಿಕಾರಿಯೊಬ್ಬರು, 'ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭದ್ರತೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಮತ್ತು ವಾಹನಗಳ ದುರುಪಯೋಗವನ್ನು ತಡೆಯಲು ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದರೆ ನಂತರ ತೆಗೆಯಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಸಾಧ್ಯವಾಗುವುದಿಲ್ಲ. ಏಪ್ರಿಲ್ 1, 2019 ಕ್ಕೂ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಈ ನಂತರ ನೋಂದಣಿಯಾದ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ' ಎಂದರು.

ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ನವೆಂಬರ್ 17ರವರೆಗೆ ಗಡುವು ನೀಡಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರಕ್ಕೆ ಯೋಜಿಸುತ್ತಿದ್ದೇವೆ. ಆದರೆ, ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಏಕೆಂದರೆ, ಮೂಲ ಸಲಕರಣೆ ತಯಾರಕರಿಂದ (ಒಇಎಂ) ಮಾನ್ಯತೆ ಪಡೆದಿರುವ ಎಚ್ಎಸ್ಆರ್‌ಪಿ ತಯಾರಕರಿಗೆ ಮಾತ್ರ ನಂಬರ್ ಪ್ಲೇಟ್ ಅಳವಡಿಕೆಗೆ ಅನುಮತಿ ನೀಡಿರುವುದರ ವಿರುದ್ಧ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಗಡುವು ಕೊನೆಗೊಳ್ಳಲು ಒಂದು ತಿಂಗಳಿಗಿಂತ ಕಡಿಮೆ ಅವಧಿಯಿದ್ದು, ಸರ್ಕಾರವು ಮತ್ತೆ ಗಡುವನ್ನು ವಿಸ್ತರಿಸಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT