ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಲಿಂಗಸುಗೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.

ಈ ಘಟನೆ ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಹಟ್ಟಿ ಗ್ರಾಮದ 2.6 ಕಿಮೀ ಸುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT