ಶಮಿ ಪೂಜೆ ನೆರವೇರಿಸುತ್ತಿರುವ ಯದುವೀರ್ ಒಡೆಯರ್ 
ರಾಜ್ಯ

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಬನ್ನಿಮಂಟಪದಲ್ಲಿ ಶಮಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್

ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.

 ಕಳೆದ 9 ದಿನಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು. ಇಂದು ವಿಜಯದಶಮಿ ಅಥವಾ ದಸರಾ ನಿಮಿತ್ತ ಮೈಸೂರಿನಲ್ಲಿ ಜಂಬೂಸವಾರಿ ನಡೆಯುತ್ತದೆ. 

ಯದುವೀರ್ ಒಡೆಯರ್ ರಿಂದ ಶಮಿ ಪೂಜೆ: ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದ ಬನ್ನಿಮಂಟಪದಲ್ಲಿ ಇಂದು ಮಧ್ಯಾಹ್ನ ಜಂಬೂ ಸವಾರಿಗೆ ಮುನ್ನ ಶಮಿ ಪೂಜೆ ನಡೆಯಿತು. ರಾಜ ಯದುವೀರ್​ ಒಡೆಯರ್​ ಶಮಿ ಪೂಜೆ ನೆರವೇರಿಸಿದರು. ರಾಜ ಪುರೋಹಿತರ ನೇತೃತ್ವದಲ್ಲಿ ಬನ್ನಿಪೂಜೆ ನೆರವೇರಿಸಿದ ಯದುವೀರ್, ಅಲ್ಲಿ ನೆರೆದಿದ್ದವರಿಗೆ ಪೂಜೆಗೆ ಬಳಸಿದ ಹೂಗಳನ್ನು ವಿತರಿಸಿ, ಅರ್ಚಕರಿಗೆ ‘ಕಣಿಕೆ’ ಅರ್ಪಿಸಿ, ವಿಜಯ ಯಾತ್ರೆಯಲ್ಲಿ ಅರಮನೆಗೆ ಮರಳಿದರು.

ಇಂದು ಮಧ್ಯಾಹ್ನ 1.45ಕ್ಕೆ ನಂದಿಧ್ವಜ ಪೂಜೆ ನೆರವೇರಲಿದೆ. ರಾತ್ರಿ ಬನ್ನಿ ಮಂಟಪದಲ್ಲಿ ಪಂಜಿನ ಕವಾಯತು ನಡೆಯಲಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಬರಲಿಲ್ಲ, ವಿದ್ಯುತ್ ಕೊರತೆ ಉಂಟಾಯಿತು. ರಾಜ್ಯದಲ್ಲಿ ಈಗಲಾದರೂ ಮಳೆ‌ ಬರಲಿ ಅಂತ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT