ಸಾಂದರ್ಭಿಕ ಚಿತ್ರ 
ರಾಜ್ಯ

ಸೇನಾ ನೇಮಕಾತಿ ಹೆಸರಲ್ಲಿ 150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದ ದಂಪತಿ ಬಂಧನ

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ 150 ಯುವಕರಿಗೆ ಒಂದು ಕೋಟಿ ರೂಪಾಯಿ ವಂಚಿಸಿರುವ ಅತಿದೊಡ್ಡ ಹಗರಣವನ್ನು ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಬಯಲಿಗೆಳಿದಿದ್ದಾರೆ.

ಬೆಂಗಳೂರು: ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ 150 ಯುವಕರಿಗೆ ಒಂದು ಕೋಟಿ ರೂಪಾಯಿ ವಂಚಿಸಿರುವ ಅತಿದೊಡ್ಡ ಹಗರಣವನ್ನು ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಬಯಲಿಗೆಳಿದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ಸೇನೆ ತೊರೆದು ಬಂದಿರುವ ಹುಬ್ಬಳ್ಳಿ ನಿವಾಸಿ 40 ವರ್ಷದ ಶಿವರಾಜ್ ವಟಗಲ್ ಮತ್ತು ಆತನ ಹೆಂಡತಿ ಭೀಮವ್ವ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಅವರಿಂದ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿಗೆ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಮಾಹಿತಿ ಬ್ಯೂರೋದ ರಕ್ಷಣಾ ವಿಭಾಗ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

'ಅಕ್ಟೋಬರ್ 20 ರಂದು ಚಿತ್ರದುರ್ಗದಲ್ಲಿ ವಂಚಕ ಮತ್ತು ಆತನ ಹೆಂಡತಿಯನ್ನು ಸೆರೆಹಿಡಿಯಲು ಮಿಲಿಟರಿ ಇಂಟೆಲಿಜೆನ್ಸ್, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರ ಪೊಲೀಸರ ತಂಡವು ಜಂಟಿ ಕಾರ್ಯಾಚರಣೆ ನಡೆಸಿತು. ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ 150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದಾರೆ' ಎಂದು ಅದು ಹೇಳಿದೆ.

ದಾವಣಗೆರೆ ಜಿಲ್ಲೆಯ ಪ್ರಕಾಶ್ (31) ಎಂಬುವವರು ಶಿವರಾಜ್ ವಟಗಲ್ ವಿರುದ್ಧ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT