ಮರಿಗೆ ಜನ್ಮ ನೀಡಿದ ನೇತ್ರಾವತಿ ಆನೆ 
ರಾಜ್ಯ

ಬೆಳಗ್ಗೆ ತಾಲೀಮು ನಡೆಸಿ ಸಂಜೆ ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ

ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ.

ಶಿವಮೊಗ್ಗ : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ.

ಕೆಲವು ವರ್ಷಗಳಿಂದ ಶಿವಮೊಗ್ಗ ದಸರಾದಲ್ಲಿ ಬೆಳ್ಳಿ ಅಂಬಾರಿ ಹೊರಲು ಮೂರು ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯು ಅಂಬಾರಿ ಹೊರುವ ಸಾಗರನ ಜತೆ ಯಾವ ಅನೆಗಳನ್ನು ಕಳುಹಿಸಬೇಕು ಎಂದು ಗೊಂದಲ ಮೂಡಿತ್ತು. ಕುಂತಿ ಈಚೆಗೆ ಮರಿ ಹಾಕಿತ್ತು. ಭಾನುಮತಿ ತುಂಬು ಗರ್ಭಿಣಿಯಾಗಿತ್ತು. ಹಾಗಾಗಿ ಸಾಗರ ಆನೆ ಜತೆ ನೇತ್ರಾವತಿ, ಹೇಮಾವತಿ ಆನೆಗಳನ್ನು ಕಳುಹಿಸಲಾಗಿತ್ತು.

ಪ್ರತಿ ವರ್ಷದಂತೆ ಈ ವರ್ಷವು ಶಿವಮೊಗ್ಗದಲ್ಲಿ ಅದ್ಧೂರಿಯಾಗಿ ದಸರಾ ಆಚರಣೆ ನೆರವೇರುತ್ತದೆ. ಶಿವಮೊಗ್ಗ ಪಾಲಿಕೆ ಮೇಯರ್ ಮನವಿ ಬೆನ್ನಲ್ಲೆ ಸಕ್ರೈಬೈಲು ಬಿಡಾರದಿಂದ 3 ಪಳಗಿದ ಆನೆಗಳನ್ನು ಇಲ್ಲಿನ ದಸರಾ ಕಳುಹಿಸಲು ಅರಣ್ಯ ಸಚಿವರಿಂದ ಗ್ರೀನ್ ಸಿಗ್ನಲ್ ದೊರೆತಿತ್ತು. ಅದರಂತೆ ಸಾಗರ್ (ಗಂಡಾನೆ), ಹೇಮಾವತಿ ಮತ್ತು ನೇತ್ರಾವತಿ ಆನೆಗಳು ಹಬ್ಬಕ್ಕೂ ಮೊದಲೇ ಮಲೆನಾಡಿನ ಜಿಲ್ಲೆಗೆ ಬಂದು ಇಲ್ಲಿನ ವಾಸವಿ ಶಾಲಾ ಆವರಣದಲ್ಲಿ ನೆಲೆಸಿದ್ದವು. ಅಗತ್ಯ ತಾಲೀಮು ಸಹ ನಡೆಸಲಾಗಿತ್ತು.

ಮೂರು ದಿನದ ಹಿಂದೆ ಶಿವಮೊಗ್ಗ ನಗರಕ್ಕೆ ಕರೆತಂದು ಮೆರವಣಿಗೆ ಮಾರ್ಗದಲ್ಲಿ ಬೆಳಗ್ಗೆ ಸಂಜೆ ತಾಲೀಮು ನಡೆಸಲಾಗುತಿತ್ತು. ನಿನ್ನೆ ಸಂಜೆ ಕೂಡ ತಾಲೀಮು ಮುಗಿಸಿ ವಾಸವಿ ಶಾಲೆ ಆವರಣದಲ್ಲಿ ಬೀಡು ಬಿಟ್ಟಿದ್ದವು. ರಾತ್ರಿ 10 ಗಂಟೆ ಸುಮಾರಿಗೆ ನೇತ್ರಾವತಿ ಮರಿಗೆ ಜನ್ಮ ನೀಡಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT