ಮೈಸೂರಿನಲ್ಲಿಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಸಂಪ್ರದಾಯಗಳ ಆಚರಣೆ 
ರಾಜ್ಯ

ಮೈಸೂರು ಅರಮನೆಯಲ್ಲಿ ಇಂದು ಏನೇನು ಸಂಪ್ರದಾಯ, ಪೂಜೆಗಳು ನೆರವೇರಿದವು?

ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara-2023) ಮಹೋತ್ಸವ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಬೆಳಗ್ಗೆ ವಜ್ರ ಮುಷ್ಠಿ ಕಾಳಗ ನಡೆಯುತ್ತಿದ್ದಂತೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿಜಯ ಯಾತ್ರೆ ನಡೆಸಿ, ಬನ್ನಿ ಪೂಜೆಯನ್ನೂ ನೆರವೇರಿಸಿದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara-2023) ಮಹೋತ್ಸವ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಬೆಳಗ್ಗೆ ವಜ್ರ ಮುಷ್ಠಿ ಕಾಳಗ ನಡೆಯುತ್ತಿದ್ದಂತೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿಜಯ ಯಾತ್ರೆ ನಡೆಸಿ, ಬನ್ನಿ ಪೂಜೆಯನ್ನೂ ನೆರವೇರಿಸಿದರು. ಕಂಕಣವನ್ನು ವಿಸರ್ಜನೆ ಮಾಡುವ ಮೂಲಕ ಮೈಸೂರು ರಾಜಮನೆತನದ ವಿಜಯದಶಮಿ ಆಚರಣೆಗೆ ತೆರೆಬಿದ್ದಿದೆ.

ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಜತೆ ಯದುವೀರ್‌ ಅವರು ಮೆರವಣಿಗೆ ಹೊರಟರು. ಇದಕ್ಕಿಂತ ಮೊದಲು ಪಂಚಲೋಹದ ಪಲ್ಲಕ್ಕಿಗೆ ಪೂಜೆ ನೆರವೇರಿಸಿದರು. ಅಲ್ಲಿಂದ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇವಸ್ಥಾನದಲ್ಲಿ ಪೂಜೆ‌ ಸಲ್ಲಿಸಿ, ದೇವಸ್ಥಾನದ ಒಳ ಆವರಣದಲ್ಲಿ ಇರುವ ಶಮಿ ವೃಕ್ಷಕ್ಕೆ ಪೂಜೆ‌ ಸಲ್ಲಿಸಿದರು.

ಭುವನೇಶ್ವರಿ ಮಂಟಪದಲ್ಲಿರುವ ಬನ್ನಿ ಮರಕ್ಕೆ ಶಾಸ್ತ್ರೋಕ್ತವಾಗಿ ಯದುವೀರ್‌ ಪೂಜೆ ಸಲ್ಲಿಸಿದರು. ಪಟ್ಟದ ಕತ್ತಿ ಹಿಡಿದು ವಿಜಯದಶಮಿ ಮೆರವಣಿಗೆ ಮಾಡಿದ ಅವರು ಬನ್ನಿಮರಕ್ಕೆ ಪದ್ಧತಿಯಂತೆ ಪೂಜೆಯನ್ನು ನೆರವೇರಿಸಿದರು.ಪೂಜೆ ಬಳಿಕ ಬಿಎಂಡಬ್ಲ್ಯು ಕಾರಿನಲ್ಲಿ ಅರಮನೆ ವಾಪಸ್ ಆದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಂಕಣ ವಿಸರ್ಜನೆ‌ ಮಾಡಿದರು. ಆ ಮೂಲಕ ರಾಜ ಮನೆತನದ ವಿಜಯದಶಮಿ ಮುಕ್ತಾಯವಾಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!