ಪ್ರಾತಿನಿಧಿಕ ಚಿತ್ರ 
ರಾಜ್ಯ

ವಿದ್ಯುತ್ ಕಡಿತ ವಿರೋಧಿಸಿ ರೈತರ ವಿನೂತನ ಪ್ರತಿಭಟನೆ; ಮೊಸಳೆ ಕಂಡು ಗಾಬರಿಯಾದ ಹೆಸ್ಕಾಂ ಅಧಿಕಾರಿಗಳು!

ವಿಜಯಪುರದ ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಅನಿಯಮಿತ ವಿದ್ಯುತ್ ಕಡಿತದ ವಿರುದ್ಧದ ವಿನೂತನ ಪ್ರತಿಭಟನೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಕಚೇರಿಗೆ ಮೊಸಳೆಯನ್ನು ಕೊಂಡೊಯ್ದಿದ್ದಾರೆ.

ವಿಜಯಪುರ: ಇಲ್ಲಿನ ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಅನಿಯಮಿತ ವಿದ್ಯುತ್ ಕಡಿತದ ವಿರುದ್ಧದ ವಿನೂತನ ಪ್ರತಿಭಟನೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಕಚೇರಿಗೆ ಮೊಸಳೆಯನ್ನು ಕೊಂಡೊಯ್ದಿದ್ದಾರೆ.

ಹಗಲಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಕಾರಣ ರಾತ್ರಿ ವೇಳೆ ತಮ್ಮ ಜಮೀನಿಗೆ ತೆರಳಿದಾಗ ಕಾಡುಪ್ರಾಣಿಗಳು ಮತ್ತು ಹಾವುಗಳ ಕಾಟದಿಂದ ಆತಂಕಕ್ಕೆ ಒಳಗಾಗಿದ್ದರು.

ಕಳೆದ ವಾರ ತಡರಾತ್ರಿ ವಿದ್ಯುತ್ ಸರಬರಾಜು ಮಾಡಿದ ನಂತರ ರೈತರೊಬ್ಬರು ತಮ್ಮ ಜಮೀನಿಗೆ ನೀರು ಹಾಯಿಸಲು ಹೋದಾಗ ತಮ್ಮ ಜಮೀನಿನಲ್ಲಿ ಮೊಸಳೆ ಇರುವುದು ಕಂಡುಬಂದಿದೆ. ಮೊಸಳೆ ಸಮೀಪದ ಕೃಷ್ಣಾ ನದಿಯಿಂದ ಬೇಟೆಗಾಗಿ ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನಂತರ ರೈತ ಕೂಡಲೇ ಗ್ರಾಮಸ್ಥರಿಗೆ ಕರೆ ಮಾಡಿದ್ದು, ಮೊಸಳೆಯನ್ನು ಕಟ್ಟಿ ಅಕ್ಟೋಬರ್ 19 ರಂದು ಹೆಸ್ಕಾಂ ಕಚೇರಿಗೆ ಕೊಂಡೊಯ್ದು ತಮಗಿರುವ ಅಪಾಯದ ಕುರಿತು ‘ಪ್ರದರ್ಶನ’ ಮಾಡಿದ್ದಾರೆ.

ತಮ್ಮ ಕಚೇರಿ ಬಳಿ ‘ಅಸಾಮಾನ್ಯ ಅತಿಥಿ’ಯನ್ನು ಕಂಡು ಗಾಬರಿಗೊಂಡ ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಹಗಲಿನಲ್ಲಿ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳುವುದಾಗಿ ಹೆಸ್ಕಾಂ ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ನಂತರ ಅರಣ್ಯಾಧಿಕಾರಿಗಳು ಮೊಸಳೆಯನ್ನು ಆಲಮಟ್ಟಿ ಅಣೆಕಟ್ಟೆಯಲ್ಲಿ ಬಿಟ್ಟಿದ್ದಾರೆ. 

ನೀರಾವರಿ ಇಲಾಖೆ ಅಧಿಕಾರಿಗಳ ಪ್ರಕಾರ, ಈ ವರ್ಷ ಅಲ್ಪ ಪ್ರಮಾಣದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಅಸ್ತವ್ಯಸ್ತವಾಗಿವೆ. ಅಣೆಕಟ್ಟುಗಳಲ್ಲಿ ನೀರಾವರಿ ಉದ್ದೇಶಕ್ಕೆ ಬಿಡುವಷ್ಟು ನೀರು ಇಲ್ಲ. ರೈತರು ನೀರಾವರಿಗಾಗಿ ಬೋರ್‌ವೆಲ್‌ಗಳನ್ನು ಅವಲಂಬಿಸಿದ್ದಾರೆ.

ನೀರಾವರಿ ಉದ್ದೇಶಕ್ಕಾಗಿ ಅತಿಯಾದ ವಿದ್ಯುತ್ ಬಳಕೆಯು ವಿದ್ಯುತ್ ಕೊರತೆಯನ್ನು ಸೃಷ್ಟಿಸಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಬೇಡಿಕೆ ಮತ್ತು ಬಳಕೆಯಲ್ಲಿ ತೀವ್ರ ಏರಿಕೆಯಿಂದಾಗಿ ವಿದ್ಯುತ್ ಕೊರತೆ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ಅಕ್ಟೋಬರ್‌ನಲ್ಲಿ ವಿದ್ಯುತ್ ಬಳಕೆ ಸುಮಾರು 10,000 ಮೆಗಾವ್ಯಾಟ್ ಆಗಿದ್ದು, ಕೃಷಿ ಉದ್ದೇಶಗಳಿಗಾಗಿ ಹೆಚ್ಚಿದ ವಿದ್ಯುತ್ ಬಳಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಬಳಕೆ 16,000 ಮೆಗಾವ್ಯಾಟ್‌ಗೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT