ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣಕ್ಕೆ ಚಿಂತನೆ: ಡಿಕೆ ಶಿವಕುಮಾರ್

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ, ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ತಿಳಿಸಿದ್ದಾರೆ. 

ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆ ಎಂದಿದ್ದಾರೆ. 

ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT