ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಲ್ಟಿಯಾದ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ 
ರಾಜ್ಯ

ಚಾಮರಾಜನಗರ: ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ; 24 ಮಂದಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ತಮಿಳುನಾಡಿನ ಊಟಿ ಗಿರಿಧಾಮದಿಂದ ಬರುತ್ತಿದ್ದ ಬಸ್ಸು ಕರ್ನಾಟಕದ ಮೈಸೂರಿಗೆ ತೆರಳುತ್ತಿತ್ತು.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಬುಧವಾರ ಬೆಳ್ಳಂಬೆಳಗ್ಗೆ ಮೇಲುಕಾಮನಹಳ್ಳಿ ಸಮೀಪದ ಅರಣ್ಯ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಡಬ್ಲ್ಯುಬಿ 37ಡಿ 5712 ನೋಂದಣಿ ಸಂಖ್ಯೆಯ ಬಸ್ ಪಲ್ಟಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ಊಟಿ ಗಿರಿಧಾಮದಿಂದ ಬರುತ್ತಿದ್ದ ಬಸ್ಸು ಕರ್ನಾಟಕದ ಮೈಸೂರಿಗೆ ತೆರಳುತ್ತಿತ್ತು. ಗಾಯಗೊಂಡ ಪ್ರವಾಸಿಗರನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಪಶ್ಚಿಮ ಬಂಗಾಳದ ನೇಮತ್‌ಪುರದ ಪಕ್ಷಿರಾಜ್ ಟೂರ್ಸ್ ಮತ್ತು ಟ್ರಾವೆಲ್ಸ್ ಕಂಪನಿಯ ಮಾಲೀಕತ್ವದ ಬಸ್ ಇದಾಗಿದೆ.

ವನ್ಯಜೀವಿಗಳು ಹೆಚ್ಚಾಗಿ ಕಾಣಸಿಗುವ ಅರಣ್ಯದಲ್ಲಿ ಈ ಅವಘಡ ಸಂಭವಿಸಿದ್ದರೂ, ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸಿನೊಳಗೆ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT