ವಿಭೂತಿಪುರ ಕೆರೆ 
ರಾಜ್ಯ

ವಿಭೂತಿಪುರ ಕೆರೆಗೆ ಬೇಲಿ ಹಾಕಿ, ಭದ್ರತಾ ಸಿಬ್ಬಂದಿಗಳ ನೇಮಿಸಿ: ಕೆರೆ ಕಾರ್ಯಕರ್ತರ ಆಗ್ರಹ

ಎಚ್‌ಎಎಲ್ ಬಳಿಯ ವಿಭೂತಿಪುರ ಕೆರೆಗೆ ಬೇಲಿ ಹಾಕಿ, ಭದ್ರತಾ ಸಿಬ್ಬಂದಿಗಳ ನೇಮಕ ಮಾಡುವಂತೆ ಕೆರೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಬೆಂಗಳೂರು: ಎಚ್‌ಎಎಲ್ ಬಳಿಯ ವಿಭೂತಿಪುರ ಕೆರೆಗೆ ಬೇಲಿ ಹಾಕಿ, ಭದ್ರತಾ ಸಿಬ್ಬಂದಿಗಳ ನೇಮಕ ಮಾಡುವಂತೆ ಕೆರೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಹಿಂದೆ 33 ವರ್ಷದ ವ್ಯಕ್ತಿಯೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ಬಳಿಕ ಕೆರೆ ಕಾರ್ಯಕರ್ತರು ಮತ್ತು ಸುತ್ತಮುತ್ತಲಿನ ತಲಕಾವೇರಿ ಲೇಔಟ್, ಬೃಂದಾವನ ಲೇಔಟ್, ವೀರಭದ್ರ ಲೇಔಟ್ ಮತ್ತು ಅನ್ನಸಂದ್ಯಾಪಾಳ್ಯ ನಿವಾಸಿಗಳು ಕೆರೆಯ ಸುತ್ತಮುತ್ತ ಸಿಸಿಟಿವಿ ಅಳವಡಿಸಿ, ಬ್ಯಾರಿಕೇಡ್‌ಗಳ ಹಾಕುವಂತೆ ಒತ್ತಾಯಿಸುತ್ತಿದ್ದಾರೆ.

5 ವರ್ಷಗಳಲ್ಲಿ ಇಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯು 45 ಎಕರೆ ಪ್ರದೇಶದಲ್ಲಿದ್ದು, ಕೆರೆಯ ಸುತ್ತ ಭದ್ರತೆ ಒದಗಿಸಲು ಸಿಬ್ಬಂದಿಗಳ ನೇಮಿಸುವಂತೆ ಆಗ್ರಹಿಸಿದ್ದಾರೆ.

ವಿಭೂತಿಪುರ ಕೆರೆಸಂರಕ್ಷಣಾ ಸಮಿತಿಯ ಸದಸ್ಯೆ ಸತ್ಯವಾಣಿ ಶ್ರೀಧರ್ ಮಾತನಾಡಿ, ಕೆರೆಯ ಅಭಿವೃದ್ಧಿಗೆ ಈ ಹಿಂದೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದರೂ ಸುರಕ್ಷತೆ ಇಲ್ಲದಂತಾಗಿದೆ. ಕೆರೆಯ ಸುತ್ತಲೂ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ, ಕೆರೆಯ ಸುತ್ತಲೂ ಹಾಕಲಾಗಿದ್ದ ಬೇಲಿ ಹಾಳಾಗಿದೆ. ಬೇಲಿ ಮುರಿತವಾಗಿರುವುದರಿಂದ ಜಾನುವಾರುಗಳು ಕೆರೆಯ ಹತ್ತಿರಕ್ಕೆ ಸುಲಭವಾಗಿ ಹೋಗುವಂತಾಗಿದೆ. ಈ ಹಿಂದೆಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ವರದಿಯಾಗಿತ್ತು. ಇದೀಗ ಮತ್ತೊಂದು ಘಟನೆ ವರದಿಯಾಗಿದೆ. ಯುವಕರು ಮತ್ತು ಮಾದಕ ವ್ಯಸನಿಗಳು ಕೆರೆ ಪ್ರದೇಶದಲ್ಲಿ ಸ್ವತಂತ್ರವಾಗಿ ಓಡಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೆರೆಯ ಅಧಿಕಾರಿಗಳು ಮತ್ತು ಪೊಲೀಸರು ಕ್ರಮಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಘಟನೆ ಬಳಿಕ ಬಿಬಿಎಂಪಿ ಲೇಕ್ ಎಂಜಿನಿಯರ್ ಸಪ್ನಾ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ, ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದರು.

ರೈಲು ಮಾರ್ಗಗಳನ್ನು ದಾಟುವಾಗ ಅನೇಕ ಜನರು ಸಾಯುತ್ತಾರೆ. ಹಾಗೆಂದು ಇಡೀ ರೈಲು ಮಾರ್ಗಕ್ಕೆ ಬ್ಯಾರಿಕೇಡ್ ಹಾಕಲು ಸಾಧ್ಯವೇ? ಇದೂ ಅದೇ ರೀತಿಯದ್ದೇ ಆಗಿದೆ. ಜನರು ಜಲಮೂಲದ ಬಳಿ ಹೋಗದಂತೆ ಜಾಗೃತರಾಗಿರಬೇಕು ಎಂದು ತಿಳಿಸಿದರು ಎಂದು ಆರೋಪಿಸಿದ್ದಾರೆ.

ಇದಷ್ಟೇ ಅಲ್ಲದೆ, ಕೆಲ ಮಾಂತ್ರಿಕರು ಕೆರೆಯ ಬಳಿಗೆ ಬಂದು ಹೂವು, ತೆಂಗಿನಕಾಯಿ, ವೀಳ್ಯದೆಲೆ ಎಸೆದ ಘಟನೆಗಳೂ ನಡೆದಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

New Labour Codes- ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ, ಯೂನಿಯನ್‌ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ

ಮತ್ತೆ ಶಾಕ್ ಕೊಟ್ಟ Amazon, ಅಕ್ಟೋಬರ್‌ನಲ್ಲಿ 1800ಕ್ಕೂ ಅಧಿಕ ಎಂಜಿನಿಯರ್ ಗಳ ಉದ್ಯೋಗ ಕಡಿತ, ಒಟ್ಟಾರೆ 14 ಸಾವಿರ ಮಂದಿ ವಜಾ!

ಬಿಹಾರ ವಿಧಾನಸಭೆ ಸ್ಪೀಕರ್ ಹುದ್ದೆಗೆ ತೀವ್ರಗೊಂಡ ಲಾಬಿ; ಬಿಜೆಪಿ, ಜೆಡಿಯು ನಡುವೆ ಪೈಪೋಟಿ!

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

SCROLL FOR NEXT