ಕರ್ನಾಟಕ ಹೈಕೋರ್ಟ್ 
ರಾಜ್ಯ

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಈ ಮೂಲಕ ಹೈಕೋರ್ಟ್‌ನ ಒಟ್ಟು ನ್ಯಾಯಾಧೀಶರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು ಮಂಜೂರಾದ ನ್ಯಾಯಾಧೀಶರ ಸಂಖ್ಯೆ 62.

ಸದ್ಯ ನ್ಯಾಯಾಲಯ 2ರಲ್ಲಿ ಪ್ರಕರಣಗಳನ್ನು ನಿರ್ವಹಿಸುತ್ತಿರುವ ಹಿರಿಯ ನ್ಯಾಯಮೂರ್ತಿ ಜಿ. ನರೇಂದರ್ ಅವರನ್ನು ಆಂಧ್ರಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಅಕ್ಟೋಬರ್ 27ರಂದು ಅವರು ಇಲ್ಲಿ ಅಂತಿಮ ಸೇವೆ ಸಲ್ಲಿಸಲಿದ್ದಾರೆ.

ನ್ಯಾಯಮೂರ್ತಿ ನರೇಂದರ್ ಅವರ ವರ್ಗಾವಣೆ ಜಾರಿಯಾದಾಗ ಹೈಕೋರ್ಟ್‌ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ ಮತ್ತೆ 51ಕ್ಕೆ ಇಳಿಯಲಿದೆ. 

ಕೋಲಾರ ಜಿಲ್ಲೆಯ ದೊಡ್ಡಕುರುಬರಹಳ್ಳಿಯ ಅರವಿಂದ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಅವರು 2004 ರಿಂದ 2012 ರವರೆಗೆ ಆದಾಯ ತೆರಿಗೆ ಇಲಾಖೆಯ ವಕೀಲರಾಗಿ ಕೆಲಸ ಮಾಡಿದ್ದಾರೆ.

ಅವರು ಕಸ್ಟಮ್ಸ್ ಮತ್ತು ಜಿಎಸ್‌ಟಿ ಪ್ರಕರಣಗಳ ಹಿರಿಯ ವಕೀಲರಾಗಿ ಹೈಕೋರ್ಟ್‌ನಲ್ಲಿ ಪ್ರತಿನಿಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT