ಬಂಧಿತ ಆರೋಪಿಗಳೊಂದಿಗೆ ಪೊಲೀಸರು 
ರಾಜ್ಯ

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ

ಪಂಡಿತನಹಳ್ಳಿ ಗ್ರಾಮದ ಸಮೀಪದ ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ನವಿಲು ಭೇಟೆಯಾಡಿ ಅದರ ಮಾಂಸವನ್ನು ತಿನ್ನುತ್ತಿದ್ದ ಮೂವರು ಕಾರ್ಮಿಕರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. 

ತುಮಕೂರು: ಜಿಲ್ಲೆಯ ಪಂಡಿತನಹಳ್ಳಿ ಗ್ರಾಮದ ಸಮೀಪದ ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ನವಿಲು ಭೇಟೆಯಾಡಿ ಅದರ ಮಾಂಸವನ್ನು ತಿನ್ನುತ್ತಿದ್ದ ಮೂವರು ಕಾರ್ಮಿಕರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. 

ಖಚಿತ ಮಾಹಿತಿ ಮೇರೆಗೆ ಆರ್‌ಎಫ್‌ಒ ಪವಿತ್ರಾ ಮತ್ತು ಡಿಆರ್‌ಎಫ್‌ಒ ರಬ್ಬಾನಿ ನೇತೃತ್ವದ ಅರಣ್ಯ ತಂಡ ಎಸ್‌ಆರ್‌ಎಸ್ ಇಟ್ಟಿಗೆ ಭಟ್ಟಿಯಲ್ಲಿರುವ ಶೆಡ್ ಮೇಲೆ ದಾಳಿ ನಡೆಸಿ, ನವಿಲಿನ ಮಾಂಸವನ್ನು ಪತ್ತೆ ಹಚ್ಚಿದೆ. 1.5 ಕೆ.ಜಿ ತೂಕದ ಮಾಂಸ, ಗರಿಗಳು, ಬಲೆ, ಅಡುಗೆ ಮಾಡಲು ಬಳಸಿದ್ದ ಪಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಾದರಿಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ.

ಈ ಮಧ್ಯೆ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT