ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಸರಣಿ ಅಪಘಾತ: ತಾಯಿ, 7 ವರ್ಷದ ಮಗ ಸಾವು; ನಾಲ್ವರಿಗೆ ಗಾಯ

ಬೆಂಗಳೂರಿನ ಹೊರಮಾವು ಬಸ್ ನಿಲ್ದಾಣದ ಬಳಿ ಮಂಗಳವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 29 ವರ್ಷದ ಮಹಿಳೆ ಮತ್ತು ಅವರ ಏಳು ವರ್ಷದ ಮಗ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಬೆಂಗಳೂರಿನ ಹೊರಮಾವು ಬಸ್ ನಿಲ್ದಾಣದ ಬಳಿ ಮಂಗಳವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 29 ವರ್ಷದ ಮಹಿಳೆ ಮತ್ತು ಅವರ ಏಳು ವರ್ಷದ ಮಗ ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಹೊರಮಾವು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಆಟೋ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿ ತಾಯಿ-ಮಗ ಮೃತಪಟ್ಟಿದ್ದಾರೆ.

ಮೃತರ ಮಹಿಳೆಯನ್ನು ಅಶ್ವಿನಿ (29) ಹಾಗೂ ಅವರ ಏಳು ವರ್ಷದ ಮಗ ನಿಡಿಮಾಮಿಡಿ ಯಶ್ವಿನ್‌ ಎಂದು ಗುರುತಿಸಲಾಗಿದೆ. 

ಹೊರಮಾವು ಹೊರ ವರ್ತುಲ ರಸ್ತೆಯ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಲಾಗಿತ್ತು. ಅದೇ ವೇಳೆ ರಾಮಮೂರ್ತಿನಗರ ಕಡೆಯಿಂದ ಬಂದ ಆಟೋ ಚಾಲಕ, ನಿಂತಿದ್ದ ಬಸ್‌ನ್ನು ಗಮನಿಸದೆ ಹಿಂದಿನಿಂದ ಗುದ್ದಿಸಿದ್ದಾನೆ. ಆಟೋ ಹಿಂದೆ ಬರುತ್ತಿದ್ದ ಬೊಲೆರೋ ಪಿಕ್ ಆಪ್ ವಾಹನವು, ಆಟೋವನ್ನು ತಪ್ಪಿಸಲು ಹೋಗಿ ಬಲಗಡೆಗೆ ತಿರುಗಿಸಿದಾಗ ಮುಂದೆ ಹೋಗುತ್ತಿದ್ದ ಬೈಕ್‌ಗೆ ಗುದ್ದಿದ್ದಾನೆ.

ನಿಯಂತ್ರಣ ತಪ್ಪಿ ಬೈಕ್‌ನಲ್ಲಿದ್ದ ಆಂಧ್ರಪ್ರದೇಶ ಮೂಲದ ಅಶ್ವಿನಿ ಮತ್ತು ಯಶ್ವಿನ್ ಬೈಕ್‌ನಿಂದ ಬಿದ್ದು ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಶ್ವಿನಿ ಮತ್ತು ಯಶ್ವಿನ್ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಬಾಣಸವಾಡಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೀಡಾದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT