ಬಂಧಿತರಾದ ಅರ್ಚಕರು 
ರಾಜ್ಯ

ಚಿಕ್ಕಮಗಳೂರು: ಹುಲಿ ಉಗುರು ಡಾಲರ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ

ಹುಲಿ ಉಗುರು ಬೇಟೆಯನ್ನು ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರು: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ. 

ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ. 

ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT