ಧನಲಕ್ಷ್ಮಿ 
ರಾಜ್ಯ

ನೆಲಮಂಗಲ: ಮಹಿಳಾ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಆತ್ಮಹತ್ಯೆ

ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ(25)  ನೆಲಮಂಗಲದ ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಂಗಲ: ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ(25)  ನೆಲಮಂಗಲದ ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ ಬುಧವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಕೆ ತಂದೆ ಮನೆಯಲ್ಲಿರುವಾಗಲೇ ರೂಮ್ ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೋಮ್ ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಹಾಸನ ಮೂಲದವರಾದ ಧನಲಕ್ಷ್ಮಿಯ ಕುಟುಂಬ ಆಕೆಯನ್ನು ಕಂಪ್ಯೂಟರ್ ಅಪ್ಲಿಕೇಷನ್ಸ್‌ನಲ್ಲಿ ಸ್ನಾತಕೋತ್ತರ (ಎಂಸಿಎ) ಮಾಡಿಸಲು ಬೆಂಗಳೂರಿಗೆ ಬಂದಿದ್ದರು.  ನಂತರ ಆಕೆ ಕಾಡುಗೋಡಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ವರ್ಷಗಳಿಂದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು.

"ದಸರಾ ಜಂಬೂ ಸವಾರಿ ವೀಕ್ಷಿಸಲು ತನ್ನ ಸ್ನೇಹಿತರೊಂದಿಗೆ ಮೈಸೂರಿಗೆ ತೆರಳಿದ್ದ ಆಕೆ ಎರಡು ದಿನಗಳ ಹಿಂದೆ ವಾಪಸಾಗಿದ್ದಳು. ಬೆಳಗ್ಗೆ ಆಕೆ ಚೆನ್ನಾಗಿಯೇ ಇದ್ದಳು. ಇಂತಹ  ಹೆಜ್ಜೆ ಇಡುವ ಲಕ್ಷಣಗಳು ಕಾಣಿಸಿರಲಿಲ್ಲ. ಸಂಜೆ 4 ಗಂಟೆ ಸುಮಾರಿಗೆ  ಆಕೆ ನೇಣು ಬಿಗಿದುಕೊಂಡಿರುವುದನ್ನು ಕಂಡ ತಂದೆ, ಕೆಳಗಿಳಿಸಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲವಾದರೂ, ಧನಲಕ್ಷ್ಮಿ ಅವರ ಈ ನಿರ್ಧಾರಕ್ಕೆ ಸಂಭವನೀಯ ಕಾರಣ ಏನು ಎಂಬುದನ್ನು ಆಕೆಯ ಪೋಷಕರು ಬಹಿರಂಗಪಡಿಸುತ್ತಿಲ್ಲ. ಕಾರಣ  ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ನೆಲಮಂಗಲ ನಗರ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT