ಧನಲಕ್ಷ್ಮಿ 
ರಾಜ್ಯ

ನೆಲಮಂಗಲ: ಮಹಿಳಾ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಆತ್ಮಹತ್ಯೆ

ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ(25)  ನೆಲಮಂಗಲದ ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಂಗಲ: ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ(25)  ನೆಲಮಂಗಲದ ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ ಬುಧವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಕೆ ತಂದೆ ಮನೆಯಲ್ಲಿರುವಾಗಲೇ ರೂಮ್ ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೋಮ್ ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಹಾಸನ ಮೂಲದವರಾದ ಧನಲಕ್ಷ್ಮಿಯ ಕುಟುಂಬ ಆಕೆಯನ್ನು ಕಂಪ್ಯೂಟರ್ ಅಪ್ಲಿಕೇಷನ್ಸ್‌ನಲ್ಲಿ ಸ್ನಾತಕೋತ್ತರ (ಎಂಸಿಎ) ಮಾಡಿಸಲು ಬೆಂಗಳೂರಿಗೆ ಬಂದಿದ್ದರು.  ನಂತರ ಆಕೆ ಕಾಡುಗೋಡಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ವರ್ಷಗಳಿಂದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು.

"ದಸರಾ ಜಂಬೂ ಸವಾರಿ ವೀಕ್ಷಿಸಲು ತನ್ನ ಸ್ನೇಹಿತರೊಂದಿಗೆ ಮೈಸೂರಿಗೆ ತೆರಳಿದ್ದ ಆಕೆ ಎರಡು ದಿನಗಳ ಹಿಂದೆ ವಾಪಸಾಗಿದ್ದಳು. ಬೆಳಗ್ಗೆ ಆಕೆ ಚೆನ್ನಾಗಿಯೇ ಇದ್ದಳು. ಇಂತಹ  ಹೆಜ್ಜೆ ಇಡುವ ಲಕ್ಷಣಗಳು ಕಾಣಿಸಿರಲಿಲ್ಲ. ಸಂಜೆ 4 ಗಂಟೆ ಸುಮಾರಿಗೆ  ಆಕೆ ನೇಣು ಬಿಗಿದುಕೊಂಡಿರುವುದನ್ನು ಕಂಡ ತಂದೆ, ಕೆಳಗಿಳಿಸಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲವಾದರೂ, ಧನಲಕ್ಷ್ಮಿ ಅವರ ಈ ನಿರ್ಧಾರಕ್ಕೆ ಸಂಭವನೀಯ ಕಾರಣ ಏನು ಎಂಬುದನ್ನು ಆಕೆಯ ಪೋಷಕರು ಬಹಿರಂಗಪಡಿಸುತ್ತಿಲ್ಲ. ಕಾರಣ  ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ನೆಲಮಂಗಲ ನಗರ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT