ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಬರುವ ಪ್ರವಾಸಿಗರಿಗೆ ನಿಷೇಧ

ನವೆಂಬರ್ 4-6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು: ನವೆಂಬರ್ 4-6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದೆ.

ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗಾಗಿ ಈ ಸಮಯದಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.

ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುವ ಉದ್ದೇಶದಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಹಾಗಾಗಿ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಬರುವ ಪ್ರವಾಸಿಗರಿಗೆ ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ ಎಂಜು ಅಧಿಕಾರಿಗಳು ಹೇಳಿದ್ದಾರೆ.

ಅಕ್ಟೋಬರ್ 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ, ಈ ನಿಟ್ಟಿನಲ್ಲಿ ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!