ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ 
ರಾಜ್ಯ

ನಿಗಮ, ಮಂಡಳಿಗಳಿಗೆ ನೇಮಕ: ನಾಲ್ಕು ತಾಸು ಸಭೆ ನಡೆಸಿದ ಸಿಎಂ, ಡಿಸಿಎಂ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ, ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ, ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಸುಮಾರು 20 ಶಾಸಕರಿಗೆ ಆಯಕಟ್ಟಿನ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಉಭಯ ನಾಯಕರು ಒಮ್ಮತಕ್ಕೆ ಬಂದಿದ್ದಾರೆ ಎಂದು ವರದಿಗಳು ಹೇಳಿವೆ.

ನಿಗಮ-ಮಂಡಳಿಗಳ ನೇಮಕಾತಿಯಲ್ಲೂ ಪ್ರಾದೇಶವಾರು, ಜಾತಿವಾರು, ಪ್ರಾತಿನಿಧ್ಯ ನೀಡಲು ನಿರ್ಧರಿಸಲಾಗಿದ್ದು, ಸಂಪುಟ ಸೇರಲು ಆಕಾಂಕ್ಷಿಗಳಾಗಿದ್ದ ಕೆಲವು ಹಿರಿಯ ಶಾಸಕರನ್ನೂ ನಿಗಮ, ಮಂಡಳಿಗಳ ಅಧ್ಯಕ್ಷರಾಗಿ ಮಾಡುವ ಮೂಲಕ ಅವರನ್ನು ಸಮಾಧಾನಪಡಿಸಲು ತೀರ್ಮಾನಿಸಲಾಗಿದೆ. 

ಇತ್ತೀಚಿಗೆ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಜೊತೆಗೆ ಶಿವಕುಮಾರ್ ಚರ್ಚೆ ನಡೆಸಿದ್ದರು. ಸುರ್ಜೇವಾಲಾ ಅವರು ಮಧ್ಯ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದು, ಅವರ ಜೊತೆಗೆ ಚರ್ಚಿಸಿದ ಬಳಿಕ ನಿಗಮ, ಮಂಡಳಿಗಳ ನೇಮಕಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT