ಬನಸಿರಿ 
ರಾಜ್ಯ

ತುಮಕೂರು: ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರಿನ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಸ್‌ಎಸ್‌ಐಟಿ)ಯ ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ತುಮಕೂರು: ತುಮಕೂರಿನ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಸ್‌ಎಸ್‌ಐಟಿ)ಯ ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.

ದೂರಸಂಪರ್ಕ ಇಂಜಿನಿಯರಿಂಗ್‌ ವಿಭಾಗದಲ್ಲಿ 3ನೇ ಸೆಮಿಸ್ಟರ್‌ ಓದುತ್ತಿದ್ದ ಬನಸಿರಿ(20) ಅವರು ನಿನ್ನೆ ರಾತ್ರಿ ಊಟದ ನಂತರ ತನ್ನ ಕೋಣೆಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

ಬನಸಿರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅವರು ಏಳು ಬ್ಯಾಕ್‌ಲಾಗ್ ಪೇಪರ್‌ಗಳನ್ನು ಉಳಿಸಿಕೊಂಡಿದ್ದರು ಮತ್ತು ಅದರಲ್ಲಿ ಒಂದನ್ನು ಮಾತ್ರ ಪಾಸ್ ಮಾಡಿದ್ದರು. ಇದರಿಂದ ತೀವ್ರ ಒತ್ತಡಕ್ಕೆ ಸಿಲುಕಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT