ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ರಾಮನಗರ ಜಿಲ್ಲೆ ಹೆಸರು ಬದಲಿಸಿದರೆ ಪ್ರಾಣ ಪಣಕ್ಕಿಟ್ಟು ಆಮರಣಾಂತ ಉಪವಾಸ: ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸರಕಾರ ಮುಂದಾದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಸವಾಲು ಹಾಕಿದ್ದಾರೆ.

ಬೆಂಗಳೂರು: ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸರಕಾರ ಮುಂದಾದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಬಗ್ಗೆ ನನಗೂ ಕನಸಿದೆ, ಆ ಕನಸಿಗಾಗಿ ನನಗೂ ಸವಾಲು ಇದೆ, ನೋಡೋಣ. ಆ ಜಿಲ್ಲೆಯ ಹೆಮ್ಮೆಯನ್ನು ಕಾಪಾಡಲು ಕೊನೆಯ ಕ್ಷಣದವರೆಗೂ ಹೋರಾಡುತ್ತೇನೆ. ಶಿವಕುಮಾರ್ ಅವರ ಕೊಡುಗೆಯನ್ನು ಪ್ರಶ್ನಿಸಿ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಪಟ್ಟಿ ಮಾಡಲಿ ಎಂದು ಸವಾಲು ಹಾಕಿದರು.

ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ, ರಾಮನಗರದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ, ಜಿಲ್ಲೆಗೂ ನನಗೂ ವ್ಯಾವಹಾರಿಕ ಸಂಬಂಧವಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿದರೆ ನನ್ನ ಪ್ರಾಣವನ್ನೇ ಪಣಕ್ಕಿಟ್ಟು, ಅನಾರೋಗ್ಯದ ನಡುವೆಯೂ ಆಮರಣಾಂತ ಉಪವಾಸ ಕೂರಲು ಸಿದ್ಧ ಎಂದು ಕುಮಾರಸ್ವಾಮಿ ಹೇಳಿದರು. ನನ್ನ ಹೋರಾಟಕ್ಕೆ ರಾಮನಗರ ಜಿಲ್ಲೆಯ ಜನರ ಸಹಾಯ ಕೋರುತ್ತೇನೆ. ನಾನು ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದರೂ, ನನ್ನ ಜೀವನದ ಅಂತ್ಯ ರಾಮನಗರದಲ್ಲೇ ಎಂದರು.

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಮಾಡಿದ ರಸ್ತೆ, ಸೇತುವೆ ಮುಂತಾದ ಯೋಜನೆಗಳ ವಿವರವನ್ನು ನೀಡಿದ ಅವರು, ಡಿ.ಕೆ.ಶಿವಕುಮಾರ್ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಕುಮಾರಸ್ವಾಮಿ, ನಮ್ಮ ಹಳೆಯ ಸ್ನೇಹಿತರು ಧರ್ಮಸ್ಥಳದಲ್ಲಿ ಪ್ರಮಾಣ ಮಾಡುವ ಸವಾಲು ಹಾಕಿದ್ದಾರೆ. ವರ್ಗಾವಣೆ ವಿಚಾರಣದಲ್ಲಿ ಒಂದು ರೂಪಾಯಿ ಪಡೆದಿಲ್ಲ ಎಂದು ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಲು ಸಿದ್ದ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್