ಬೆಂಗಳೂರು: ನಿಗಮ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಆಮ್ ಆದ್ಮಿ ಪಕ್ಷದ ರಾಜ್ಯ ಯುವ ಘಟಕ ಉಚಿತ ಆಟೋ ಪ್ರಯಾಣ ಸೌಲಭ್ಯ ಒದಗಿಸುತ್ತಿದೆ.
ವಕೀಲರು ಮತ್ತು ಆಪ್ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ.ಹನುಮಾಪುರ ಅವರ ನೇತೃತ್ವದಲ್ಲಿ ಬೆಂಗಳೂರು ನಗರದಲ್ಲಿ 100ಕ್ಕೂ ಹೆಚ್ಚು ಆಟೋ ರಿಕ್ಷಾಗಳನ್ನು ಪರೀಕ್ಷಾರ್ಥಿಗಳ ಉಚಿತ ಪ್ರಯಾಣಕ್ಕೆ ನಿಯೋಜಿಸಿದ್ದಾರೆ.
ಇಂದು ಬೆಂಗಳೂರು ನಗರದಾದ್ಯಂತ 50ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಎಎಪಿ ಉಚಿತ ಆಟೋ ಸೌಲಭ್ಯ ನೀಡಿದ್ದು, ಇದಕ್ಕೆ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಉಚಿತ ಆಟೋ ಸೌಲಭ್ಯ ಅಕ್ಟೋಬರ್ 29, ಭಾನುವಾರವೂ ಲಭ್ಯವಿರಲಿದೆ ಎಂದು ಲೋಹಿತ್ ಜಿ. ತಿಳಿಸಿದ್ದಾರೆ.