ಪುನೀತ್ ರಾಜ್ ಕುಮಾರ್(ಸಂಗ್ರಹ ಚಿತ್ರ) 
ರಾಜ್ಯ

ನಟ ಪುನೀತ್ ರಾಜ್ ಕುಮಾರ್ 2ನೇ ವರ್ಷದ ಪುಣ್ಯತಿಥಿ: ಸಮಾಧಿ ಬಳಿ ಕುಟುಂಬಸ್ಥರಿಂದ ಪೂಜೆ, ಸ್ಮರಣೆ

ಕನ್ನಡದ ವರನಟ ಡಾ ರಾಜ್ ಕುಮಾರ್ ಅವರ ತೃತೀಯ ಪುತ್ರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡನೇ ವರ್ಷದ ಪುಣ್ಯತಿಥಿ ಇಂದು ಅಕ್ಟೋಬರ್ 29ರಂದು. ಅವರ ಸಮಾಧಿಯಿರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಇಂದು ಬೆಳಗ್ಗೆ ಕುಟುಂಬಸ್ಥರೆಲ್ಲಾ ಸೇರಿ ಪುಣ್ಯತಿಥಿಯಂದು ಸ್ಮರಿಸಿ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು:  ಕನ್ನಡದ ವರನಟ ಡಾ ರಾಜ್ ಕುಮಾರ್ ಅವರ ತೃತೀಯ ಪುತ್ರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡನೇ ವರ್ಷದ ಪುಣ್ಯತಿಥಿ ಇಂದು ಅಕ್ಟೋಬರ್ 29ರಂದು. ಅವರ ಸಮಾಧಿಯಿರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಇಂದು ಬೆಳಗ್ಗೆ ಕುಟುಂಬಸ್ಥರೆಲ್ಲಾ ಸೇರಿ ಪುಣ್ಯತಿಥಿಯಂದು ಸ್ಮರಿಸಿ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಪುಣ್ಯ ತಿಥಿಯ ಅಂಗವಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿ, ನಟ ಶಿವರಾಜ್ ಕುಮಾರ್ ದಂಪತಿ, ರಾಘವೇಂದ್ರ ರಾಜ್ ಕುಮಾರ್ ದಂಪತಿ, ಪುತ್ರರು, ಪುನೀತ್ ಅಕ್ಕಂದಿರು ಹಾಗೂ ಇತರ ಬಂಧು ಬಳಗದವರು ಬೆಳಗ್ಗೆಯೇ ಆಗಮಿಸಿ ಪೂಜೆ ಶಾಸ್ತ್ರ ನೆರವೇರಿಸಿದರು. ಅಪ್ಪು ಅವರಿಗೆ ಪ್ರಿಯವಾದ ತಿಂಡಿ-ತಿನಿಸುಗಳನ್ನು ಮಾಡಿ ತಂದು ಸಮಾಧಿ ಬಳಿ ಇಟ್ಟು ಸುತ್ತು ಹಾಕಿ ಕಂಬನಿ ಮಿಡಿದರು.

ಕಂಠೀರವ ಸ್ಟುಡಿಯೋಗೆ ರಾಜ್‌ ಕುಟುಂಬದವರು ಹಾಗೂ ಆಪ್ತರು ಆಗಮಿಸುವ ಹಿನ್ನೆಲೆಯಲ್ಲಿ ಸಮಾಧಿ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಇಡೀ ರಾಜ್‌ ಕುಟುಂಬ ತಿಥಿ ಕಾರ್ಯದಲ್ಲಿ ಭಾಗಿಯಾಗಿದ್ದರು.

ನಟ ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಪುನೀತ್ ರಾಜ್​​ಕುಮಾರ್​​ ಸಮಾಧಿಗೆ ರಾಜ್​ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಪುನೀತ್ ಪತ್ನಿ ಅಶ್ವಿನಿ, ಮಕ್ಕಳಿಂದ ಪುನೀತ್ ಸಮಾಧಿಗೆ ನಮನ. ರಾಘವೇಂದ್ರ ರಾಜ್​ಕುಮಾರ್​, ಪುತ್ರ ಯುವರಾಜ್​​ಕುಮಾರ್​​​, ಅಕ್ಕ ಪೂರ್ಣಿಮಾ, ಮಗಳು ಧನ್ಯಾ ರಾಮ್​ಕುಮಾರ್​​​ರಿಂದ ನಮನ ಸಲ್ಲಿಸಲಾಯಿತು. ಪುನೀತ್​ಗೆ ಇಷ್ಟವಾಗಿದ್ದ ಆಹಾರ ಪದಾರ್ಥ ಇಟ್ಟು ಸಮಾಧಿಗೆ ಪೂಜೆ ಸಲ್ಲಿಸಲಾಯಿತು.

ಗಣ್ಯರು, ಕಲಾವಿದರು, ರಾಜಕಾರಣಿಗಳಿಂದ ಸ್ಮರಣೆ: ಪುನೀತ್ ಅಗಲಿಗೆ ಕನ್ನಡ ಚಿತ್ರರಂಗ ಪಾಲಿಗೆ, ಕನ್ನಡ ನಾಡಿಗೆ ಸಹ ತುಂಬಲಾರದ ನಷ್ಟ ಎಂದರೆ ತಪ್ಪಾಗಲಾರದು. ಅವರ ಹಠಾತ್ ನಿಧನವನ್ನು ಇಂದಿಗೂ ಅರಗಿಸಿಕೊಳ್ಳಲಾಗುತ್ತಿಲ್ಲ. ಅವರನ್ನು ಇಂದು ನಾಡಿನ ಗಣ್ಯರು, ಕಲಾವಿದರು, ರಾಜಕಾರಣಿಗಳು ಸ್ಮರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT