ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ 240 ರೂಫ್‌ಟಾಪ್ ರೆಸ್ಟೋರೆಂಟ್‌ಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆ!

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ನಗರದಲ್ಲಿ ಅಗ್ನಿ ಸುರಕ್ಷತಾ ನಿಯಮಗಳು ಮತ್ತು ಪರವಾನಗಿ ನಿಯಮಗಳನ್ನು ಉಲ್ಲಂಘಿಸಿರುವ 240ಕ್ಕೂ ಹೆಚ್ಚು ರೂಫ್‌ಟಾಪ್ ರೆಸ್ಟೋರೆಂಟ್‌ಗಳನ್ನು ಗುರುತಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ನಗರದಲ್ಲಿ ಅಗ್ನಿ ಸುರಕ್ಷತಾ ನಿಯಮಗಳು ಮತ್ತು ಪರವಾನಗಿ ನಿಯಮಗಳನ್ನು ಉಲ್ಲಂಘಿಸಿರುವ 240ಕ್ಕೂ ಹೆಚ್ಚು ರೂಫ್‌ಟಾಪ್ ರೆಸ್ಟೋರೆಂಟ್‌ಗಳನ್ನು ಗುರುತಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇವುಗಳಲ್ಲಿ ಬಾರ್‌ಗಳು, ಹುಕ್ಕಾ ಬಾರ್‌ಗಳು ಮತ್ತು ಪಬ್‌ಗಳು ಸೇರಿವೆ ಎಂದು ಅವರು ಹೇಳಿದರು.

ನಗರದ ಕೋರಮಂಗಲದ ಬಹುಮಹಡಿ ವಾಣಿಜ್ಯ ಕಟ್ಟಡದ ಕೆಫೆಯಲ್ಲಿ ಈ ತಿಂಗಳ ಆರಂಭದಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದ ನಂತರ, ಅಗ್ನಿಶಾಮಕ ಇಲಾಖೆಯು ಈ ಸಂಸ್ಥೆಗಳಲ್ಲಿನ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗಿದೆಯೇ ಎಂದು ಪರಿಶೀಲಿಸಲು ಅಂತಹ ವಿವಿಧ ಆವರಣಗಳನ್ನು ಪರಿಶೀಲಿಸಲು ಪ್ರಾರಂಭಿಸಿತು.

'ಕೋರಮಂಗಲದಲ್ಲಿ ಸಂಭವಿಸಿದ ಪ್ರಮುಖ ಬೆಂಕಿ ಘಟನೆಯಿಂದ, ನಾವು ಅಂತಹ ರೂಫ್‌ಟಾಪ್ ರೆಸ್ಟೋರೆಂಟ್‌ಗಳನ್ನು ಪರಿಶೀಲಿಸಲು ಪ್ರಾರಂಭಿಸಿದ್ದೇವೆ ಮತ್ತು ಅಕ್ಟೋಬರ್ 26 ರವರೆಗೆ ಅಗ್ನಿ ಸುರಕ್ಷತಾ ನಿಯಮಗಳು ಮತ್ತು ಪರವಾನಗಿ ನಿಯಮಗಳನ್ನು ಉಲ್ಲಂಘಿಸಿರುವ 243 ರೆಸ್ಟೋರೆಂಟ್‌ಗಳನ್ನು ಅಗ್ನಿಶಾಮಕ ಇಲಾಖೆಯು ಗುರುತಿಸಿದೆ' ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ಸೋಮವಾರದಿಂದ ಶುಕ್ರವಾರದವರೆಗಿನ ಕೆಲಸದ ದಿನಗಳಲ್ಲಿ ಪ್ರತಿದಿನವೂ ತಪಾಸಣೆ ನಡೆಸಲಾಗುತ್ತಿದೆ. ಅಗ್ನಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ ಈ ಎಲ್ಲ ರೆಸ್ಟೋರೆಂಟ್‌ಗಳ ಪಟ್ಟಿಯನ್ನು ಮುಂದಿನ ಕ್ರಮಕ್ಕಾಗಿ ಬಿಬಿಎಂಪಿ ಆಯುಕ್ತರ ಕಚೇರಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಂಚಿಕೊಂಡ ಮಾಹಿತಿ ಪ್ರಕಾರ, ಅಕ್ಟೋಬರ್ 28 ರಂದು ಬಿಬಿಎಂಪಿ 26 ರೆಸ್ಟೋರೆಂಟ್ಸ್‌ಗಳನ್ನು ಪರಿಶೀಲಿಸಿದೆ ಮತ್ತು ಅವುಗಳಲ್ಲಿ ಏಳು ರೆಸ್ಟೋರೆಂಟ್ಸ್/ಬಾರ್‌ಗಳಿಗೆ ನೋಟಿಸ್ ನೀಡಿದೆ.

ಪರಿಶೀಲನೆಯ ನಂತರ, ಆರ್‌ಆರ್‌ನಗರದ ರೂಫ್‌ಟಾಪ್ ರೆಸ್ಟೋರೆಂಟ್ ಒಂದನ್ನು ಮುಚ್ಚಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT