ರೂಪಾ ಮೌದ್ಗಿಲ್ 
ರಾಜ್ಯ

ಖಡ್ಗ ಹಿಡಿದು ಮಹಾರಾಣಿಯಂತೆ ಕಂಗೊಳಿಸಿದ ಐಪಿಎಸ್ ಅಧಿಕಾರಿ: ರೂಪಾ ಮೌದ್ಗಿಲ್ ಹೊಸ ಲುಕ್ ವೈರಲ್!

ಖಡ್ಗ ಹಿಡಿದು, ಸಾಂಪ್ರದಾಯಿಕ ಉಡುಗೆ ತೊಟ್ಟು ಮಹಾರಾಣಿಯಂತೆ ಐಪಿಎಸ್​ ಅಧಿಕಾರಿ ಡಿ ರೂಪಾ ಅವರು ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ಖಡ್ಗ ಹಿಡಿದು, ಸಾಂಪ್ರದಾಯಿಕ ಉಡುಗೆ ತೊಟ್ಟು ಮಹಾರಾಣಿಯಂತೆ ಐಪಿಎಸ್​ ಅಧಿಕಾರಿ ಡಿ ರೂಪಾ ಅವರು ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದಸರಾ ಹಾಗೂ ನವರಾತ್ರಿ ಅಂಗವಾಗಿ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್‌ ಅವರು, ಫೋಟೋಶೂಟ್ ಮಾಡಿಸಿದ್ದು, ಫೋಟೋದಲ್ಲಿ ಮಹಾರಾಣಿಯಂತೆ ಕಂಗೊಳಿಸಿದ್ದಾರೆ.

ಫ್ಯಾಷನ್‌ ಡಿಸೈನರ್‌ ಭಾರ್ಗವಿ ಎಂಬುವವರು ರೂಪಾ ಅವರ ಫೋಟೋಗಳನ್ನು ಹಂಚಿಕೊಂಡಿದ್ದು, ಐಪಿಎಸ್​ ಅಧಿಕಾರಿ ಡಿ ರೂಪಾ ಅವರು ಸವಾಲುಗಳನ್ನು ಎದುರಿಸಿ ಗಟ್ಟಿಯಾಗಿ ನಿಲ್ಲುವ ಎಲ್ಲಾ ಮಹಿಳೆಯರಿಗೂ ಮಾದರಿಯಾಗಿದ್ದಾರೆ. ಶಕ್ತಿ, ಗಾಂಭೀರ್ಯ ಮತ್ತು ಸಬಲೀಕರಣದ ಪ್ರತಿ ರೂಪವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ಅಡೆತಡೆಗಳನ್ನು ಬದಿಗೊತ್ತಿ ಮಹಿಳೆಯರು ಮುನ್ನುತ್ತಿರುವ ಈ ಜಗತ್ತಿನಲ್ಲಿ, ಅಸಾಧಾರಣ ಶಕ್ತಿಯ ರೂಪಕ್ಕೆ ಡಿ ರೂಪಾ ಅವರು ಒಂದು ಉದಾಹಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಡಿಯೋ, ಫೋಟೋಗಳು ಕೇವಲ ಫ್ಯಾಷನ್​​ಗಾಗಿ ಅಲ್ಲ, ಇದು ಸಬಲೀಕರಣ, ಸ್ಥಿತಿಸ್ಥಾಪಕತ್ವ ಮತ್ತು ಮಹಿಳೆಯರ ಅಚಲ ಮನೋಭಾವದ ತಿಳಿಸಿಕೊಡುವ ರೂಪವಾಗಿದೆ. ನಿಮ್ಮತನ, ಸ್ವಭಿಯಾನಿಯಾಗಿ ಜಗತ್ತನ್ನೇ ಗೆಲ್ಲಬಹುದು ಎಂಬ ರಿಮೈಂಡರ್ ಆಗಿದೆ ಎಂದಿದ್ದಾರೆ.

ಇಲ್ಲಿ ರೂಪಾ ಅವರು ಶಕ್ತಿ ಮತ್ತು ಸಮಚಿತ್ತದ ನಡುವಿನ ಆಕರ್ಷಕ ಕೇಂದ್ರವಾಗಿ ಕಾಣುತ್ತಾರೆ. ನಿಮ್ಮ ನಡೆ ನುಡಿ ಸತ್ಯವಾಗಿದ್ದರೆ ನೀವು ಯಾವುದೇ ಕ್ಷೇತ್ರವನ್ನು ನಿಮ್ಮದಾಗಿಸಿಕೊಳ್ಳಬಹುದು ಎಂಬ ಆಕರ್ಷಕ ಸಾಲುಗಳನ್ನು ಭಾರ್ಗವಿ ಬರೆದಿದ್ದಾರೆ.

ರೂಪಾ ಅವರ ಹೊಸ ಲುಕ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT